ಬೆಳ್ತಂಗಡಿ : ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ತಾಲೂಕು ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಂಗವಾಗಿ ಬೆಳ್ತಂಗಡಿ ಆಡಳಿತ ಸೌಧದಿಂದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಸಂವಿಧಾನ ಜಾಥ ವೈಭವದಿಂದ ಸಾಗಿತು.

ಸಂವಿಧಾನ ಜಾಥಾದ ಬಳಿಕ ಶ್ರೀ ಧರ್ಮಸ್ಥಳ ಕಲಾಭವನದಲ್ಲಿ ಸಂವಿಧಾನ ದಿನಾಚರಣೆಯ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತಾ ಸಂವಿಧಾನದ ಅರಿವು ಮೂಡಿಸಿದರು.

