ಬೆಳ್ತಂಗಡಿ, ಡಿ. 22 : ಮಂಗಳೂರು ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂ ಕಂಕನಾಡಿಯುಲ್ಲಿ ಡಿ. 21ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025ರಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ರನ್ನರ್ಸ್ ಆಗಿ ಹೊರಹೊಮ್ಮಿದ್ದಾರೆ.
ಇವರು ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಯಶವಂತ ನೆಲ್ಯಾಡಿ ಮತ್ತು ಸೌಮ್ಯ ದಂಪತಿ ಸುಪುತ್ರಿಯಾಗಿದ್ದಾರೆ.

