ಮಂಗಳೂರು, ಫೆ. 05 : ನಗರದ ನಂತೂರಿನಲ್ಲಿ ಬುಧವಾರ ರಾತ್ರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹಸವಾರೆಯೊಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬಲ್ಲಾಳ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಇನ್ನು, ಅಪಘಾತದಲ್ಲಿ ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ. ಬಸ್ ಮತ್ತು ಸ್ಕೂಟರ್ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಹೋಗುತ್ತಿದ್ದವು. ನಂತೂರು ಬಸ್ ನಿಲ್ದಾಣದ ಬಳಿ ಸ್ಕೂಟರ್ ಗೆ ಬಸ್ ಢಿಕ್ಕಿಯಾದಾಗ ಸ್ಕೂಟರ್ ಬಸ್ ನಡಿ ಬಿದ್ದು ಸಹಸವಾರೆಯ ಮೇಲೆಯೆ ಬಸ್ ನ ಟಯರ್ ಹರಿದು ಹೋಗಿತ್ತು. ಪರಿಣಾಮ ದೀಪ್ತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

