ಕಾರ್ಕಳ : ಮನೆಯ ಕಂಪೌಂಡ್ ಒಳಗೆ ನಿಲ್ಲಿಸಿದ್ದ ಸ್ಕೂಟಿ ಕಳವುಗೈದ ಕಳ್ಳ !

Advertisement

ಕಾರ್ಕಳ, ಏ. 20 : ಕಳ್ಳನೊಬ್ಬ ಮನೆಯೊಂದರ ಬಾಗಿಲು ಒಡೆದು ಒಳನುಗ್ಗಿ, ಬಳಿಕ ಮನೆಯ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಘಟನೆ ಏ.19ರ ಮುಂಜಾನೆ ಕಾರ್ಕಳದ ಕಸಬಾ ಗ್ರಾಮದ ಆನಂದ ನಗರದಲ್ಲಿ ನಡೆದಿದೆ.

Advertisement

ಆನಂದ ನಗರದ ‘ಸ್ಟಾರ್ ಕೇಬಲ್ ನೆಟ್‌ವರ್ಕ್’ ಸಮೀಪದ ಕರಿಯಕಲ್ಲು ನಿವಾಸಿ ಹರೀಶ್ ಶೆಟ್ಟಿ (46) ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಉಜಿರೆಯಲ್ಲಿ ಕೆಲಸ ಮಾಡಿಕೊಂಡಿರುವ ಹರೀಶ್ ಇವರು, ಏಪ್ರಿಲ್ 16ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿ ತೆರಳಿದ್ದರು. ಏಪ್ರಿಲ್ 19ರಂದು ಬೆಳಿಗ್ಗೆ ಸಂಬಂಧಿಕರು ಕರೆ ಮಾಡಿ ಮನೆಯ ಬಾಗಿಲು ಒಡೆದಿರುವ ಬಗ್ಗೆ ಮಾಹಿತಿ ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ.

Advertisement

ಕಳ್ಳನು ಏಪ್ರಿಲ್ 19ರ ಮುಂಜಾನೆ ವೇಳೆ ಮನೆಯ ಮುಖ್ಯ ಬಾಗಿಲನ್ನು ಯಾವುದೋ ಸಾಧನದಿಂದ ತೆರೆದು ಒಳಪ್ರವೇಶಿಸಿದ್ದು, ಮನೆಯೊಳಗಿದ್ದ ಕಪಾಟಿನ ಬೀಗ ಮುರಿದು ಬಟ್ಟೆಬರೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾನೆ. ಬಳಿಕ ಮನೆಯೊಳಗೆ ಇರಿಸಲಾಗಿದ್ದ ಸ್ಕೂಟಿಯ ಕೀಯನ್ನು ಪಡೆದು, ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ವಾಹನವನ್ನೇ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.


ಈ ಕುರಿತು ಹರೀಶ್ ಶೆಟ್ಟಿ ಅವರು ನೀಡಿದ ದೂರಿನನ್ವಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ