ಮಂಗಳೂರು : ಸೇವಾಧಾಮದ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಮತ್ತು ತಂಡದವರು ಮೆಸ್ಕಾಂ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ರವರನ್ನು ಭೇಟಿ ನೀಡಿ ಸೇವಾಭಾರತಿಯ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ CSR ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಿಗೆ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ನೀಡಿದರು. ಅಲ್ಲದೆ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಬಗ್ಗೆಯೂ ಮಾಹಿತಿ ನೀಡಿ ಅನುದಾನ ಒದಗಿಸಿಕೊಡುವ ಬಗ್ಗೆ ಚರ್ಚಿಸಲಾಯಿತು. ಇನ್ನು, ಹರೀಶ್ ಕುಮಾರ್ ರವರು ಸೇವಾಭಾರತಿಯ ಮನವಿಗೆ ಸೂಕ್ತ ಭರವಸೆಯನ್ನು ಇದೇ ಸಂದರ್ಭದಲ್ಲಿ ನೀಡಿದರು.

