ಶಿಕಾರಿಪುರ, ಆ. 19 : ಅಕ್ರಮ ಗೋ ಸಾಗಾಣಿಕೆ ಹಾಗೂ ಬಜರಂಗದಳ ಕಾರ್ಯಕರ್ತನ ಮೇಲೆ ನಡೆದ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದ್ದ ಶಿಕಾರಿಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಬಂದ್ ಹಿನ್ನೆಲೆ ಬುಧವಾರ(ಆ19)ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವರ್ತಕರು ಬಂದ್ ಗೆ ಬೆಂಬಲ ಸೂಚಿಸಿದ್ದರು.
ಬಂದ್ ಹಿನ್ನೆಲೆ ಶಿಕಾರಿಪುರ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿತ್ತು. ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಖಾಸಗಿ ಬಸ್ ನಿಲ್ದಾಣ ಬಳಿ ಜಮಾಯಿಸಿದ್ದರು.




