ಶಿರಾಡಿ, ಮಾ.13 : ಕಾರು ಮತ್ತು ರಾಜಹಂಸ ಬಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನ ನಡೆದಿದೆ. ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ಮೃತಪಟ್ಟವರೆಂದು ಗುರುತಿಸಲಾಗಿದ್ದು, ಇನ್ನಿಬ್ಬರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಬೆಂಗಳೂರಿನಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರ ಕಾರು ಮತ್ತು ಧರ್ಮಸ್ಥಳದಿಂದ ಮದ್ಯಾಹ್ನ 2.30ಕ್ಕೆ ಬೆಂಗಳೂರು ಮೂಲಕ ತಿರುಪತಿ ಹೊರಟಿರುವ ರಾಜಹಂಸ ಬಸ್ ಮಧ್ಯೆ ಶಿರಾಡಿ ಘಾಟ್ ಗಡಿ ಸಮೀಪ ಅಫಘಾತ ಸಂಭವಿಸಿದೆ.



