ಶಿಶಿಲ, ಮೇ 31 : ಮತ್ತ್ವ ತೀರ್ಥ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಶಿಶಿಲೇಶ್ವರ ದೇವಸ್ಥಾನದ ಸಮೀಪದ ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಕಿಡಿಗೇಡಿಗಳು ಕಾಪರ್ ಸಲ್ವೇಟ್ (ಮೈಲುತುತ್ತು) ಬಳಸಿ ಮೀನು ಹಿಡಿಯಲು ಯತ್ನಿಸಿದ ಪರಿಣಾಮ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಕಳೆದ ರಾತ್ರಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ನದಿ ತೀರದಲ್ಲಿ ಸಂಚರಿಸುವ ವೇಳೆ ಸತ್ತು ಬಿದ್ದ ಹಾಗೂ ತೇಲುತ್ತಿದ್ದ ಮೀನುಗಳನ್ನು ಗಮನಿಸಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ.


