ಬೆಳ್ತಂಗಡಿ, ಫೆ. 02 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ “ಗ್ರಾಮ ಸಂಗ್ರಾಮ್ – ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನ – ಕಾಲ್ನಡಿಗೆ ಜಾಥಾ” ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಬೆಳ್ತಂಗಡಿ ಶಾಸಕರ ವಿರುದ್ಧ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳು ಕೇಳಿ ಬರುತ್ತಿದೆ. ಶಾಸಕರ ಹೆಸರನ್ನು ಉಲ್ಲೇಖಿಸದೇ, ವೇದಿಕೆಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ಸರ್ಕಾರ ಪರಪ್ಪನ ಅಗ್ರಹಾರ ಜೈಲು ಗ್ಯಾರಂಟಿಯನ್ನು ನೀಡಲಿದೆ ಎಂದಿದ್ದಾರೆ. ಅಲ್ಲದೆ, ರಾಜ ಗೋಪುರ ಉದ್ಘಾಟನೆ ವಿವಾದ, ಸಾಮರಸ್ಯದ ಸಂಕ್ರಾಂತಿಯ ಕುರಿತಾಗಿಯೂ ಕೂಡಾ ಅವರು ವ್ಯಂಗ್ಯವಾಗಿ ಮಾತುಗಳನ್ನಾಡಿದ್ದಾರೆ.
ಶಾಸಕರ ಬಗೆಗೆ ರಕ್ಷಿತ್ ಶಿವರಾಂ ಏನು ಹೇಳಿದ್ದಾರೆ ? ಇಲ್ಲಿದೆ ಸಂಪೂರ್ಣ ವೀಡಿಯೋ…

