ಉಡುಪಿ : 6 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Advertisement

ಉಡುಪಿ, ಸೆ. 07 : ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 5ರಂದು ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

Advertisement

ಬಂಧಿತನನ್ನು ಶಿರಸಿ ತಾಲೂಕಿನ ಶ್ರೀನಿವಾಸ್ ಶ್ರೀಧರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಮಲ್ಪೆ ಪೊಲೀಸ್ ಠಾಣಾಧಿಕಾರಿ ಅನಿಲ್ ಕುಮಾರ್ ಡಿ. ಅವರ ಮಾರ್ಗದರ್ಶನದಲ್ಲಿ ವಾರಂಟ್ ಸಿಬ್ಬಂದಿಗಳಾದ ವಿಶ್ವನಾಥ್ ಎಚ್. ಹಾಗೂ ಮೊಹಮ್ಮದ್ ರಫಿ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಳಿಕ ಆರೋಪಿಯನ್ನು ಹಿರಿಯಡ್ಕ ಜೈಲಿಗೆ ಕಳುಹಿಸಲಾಗಿದೆ.

Advertisement

2021ರಲ್ಲಿ ಮಲ್ಪೆಯ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಶ್ರೀಧರ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ಅವರು ತಲೆಮರೆಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಶಿರಸಿ ಹಾಗೂ ಹೊನ್ನಾವರ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಕೊಲೆಯತ್ನ, ಗಾಂಜಾ ಹಾಗೂ ಮನೆ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳು ಸದ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ