ಕಾರ್ಕಳ : ತಾಲೂಕಿನ ಹಿರ್ಗಾನ ಗ್ರಾಮದ ಶ್ರೀ ಕ್ಷೇತ್ರ ಕಾನಂಗಿ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ವೃಶ್ಚಿಕ ಮಾಸ ದಿನ 2 ಸಲುವ ಕಾರ್ತಿಕ ಕೃಷ್ಣಪಕ್ಷ 13ಯು ನವೆಂಬರ್ 18ನೇ ಮಂಗಳವಾರದಂದು ಬೆಳಗ್ಗೆ 10 : 00 ಗಂಟೆಯಿಂದ ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ, ನವಕ ಪ್ರಧಾನ ಹೋಮ. ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಶ್ರೀ ಕ್ಷೇತ್ರದಲ್ಲಿ ಅದೇ ದಿನ ಸಾಯಂಕಾಲ 7:00 ಗಂಟೆಗೆ ದೀಪೋತ್ಸವ ಹಾಗೂ ಪಲ್ಲಕ್ಕಿ ಉತ್ಸವವು ಭಕ್ತಿ-ಭಾವದ ಜೊತೆಯಲ್ಲಿ ವಿಜ್ರಂಭಣೆಯಿಂದ ಜರುಗಲಿದೆ. ಅದೇ ರೀತಿಯಲ್ಲಿ ಪ್ರಸಾದ ವಿತರಣೆ ಹಾಗೂ ಮಹಾ ಅನ್ನಸಂತರ್ಪಣೆಯು ಜರುಗಲಿದೆ.

