ಬೀದರ್ : ಸಾಮಾಜಿಕ ಜಾಲತಾಣದಲ್ಲಿ ಪ್ರಭು ಶ್ರೀರಾಮನಿಗೆ ಅವಮಾನಿಸಿ ವಿಕೃತಿ ಮೆರೆದ ಕಿಡಿಗೇಡಿಗಳು – ಕ್ರಮಕ್ಕೆ ಆಗ್ರಹ

ಬೀದರ್, ಜೂ 27 : ಜಿಲ್ಲೆಯ ಬಸವಕಲ್ಯಾಣದಲ್ಲಿ ಕನ್ನೇರಿ ಶ್ರೀಗಳ ನೇತೃತ್ವದ ಬೃಹತ್ ಸಮಾವೇಶಕ್ಕೆ ಅನುಮತಿ ಸಿಕ್ಕ ಬೆನ್ನಲ್ಲೇ, ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಪ್ರಭು ಶ್ರೀರಾಮನಿಗೆ ಅವಮಾನಿಸಿ ವಿಕೃತಿ ಮೆರೆದಿದ್ದಾರೆ. ಫೇಸ್‌ಬುಕ್‌ನಲ್ಲಿ ಶ್ರೀರಾಮ ಹಾಗೂ ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

Advertisement

ಬಸವಕಲ್ಯಾಣದಲ್ಲಿ ಭುಗಿಲೆದ್ದ ಆಕ್ರೋಶ

ಬಸವಕಲ್ಯಾಣ ನಗರದ ಅಕ್ಕಮಹಾದೇವಿ ಮಹಾವಿದ್ಯಾಲಯದ ಆವರಣದಲ್ಲಿ ನಾಳೆ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಆಯೋಜನೆಗೊಂಡಿದೆ. ಈ ಸಮಾವೇಶಕ್ಕೆ ಕನ್ನೇರಿ ಶ್ರೀಗಳ ಆಗಮನಕ್ಕೆ ಅನುಮತಿ ಲಭ್ಯವಾಗುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ವಿವಾದ ಸೃಷ್ಟಿಸಲಾಗಿದೆ. ‘ಬಸವಪರ ಸಂಘಟನೆಗಳ ಒಕ್ಕೂಟ’ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಶ್ರೀರಾಮ ಹಾಗೂ ರೇಣುಕಾಚಾರ್ಯರನ್ನು ‘ತಾಲಿಬಾನಿಗಳು’ ಎಂದು ನಿಂದಿಸಿ ಅತ್ಯಂತ ಕೀಳುಮಟ್ಟದ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಲಾಗಿದೆ.

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉದ್ದೇಶಪೂರ್ವಕವಾಗಿ ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನು ಹಾಳು ಮಾಡಲು ಈ ಹುನ್ನಾರ ನಡೆಸಲಾಗಿದೆ ಎಂದು ಭಕ್ತರು ಆಪಾದಿಸಿದ್ದಾರೆ.

ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಮುಖಂಡರ ಆಗ್ರಹ

ಶ್ರೀರಾಮನಿಗೆ ಅವಮಾನಿಸಿರುವ ಫೇಸ್‌ಬುಕ್ ಖಾತೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಮುಖಂಡ ಕೃಷ್ಣ ಗೋಣೆ ಅವರು ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ಜಗದ್ಗುರು ಬಸವಣ್ಣನವರ ಪವಿತ್ರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದೂ ದೇವರುಗಳಿಗೆ ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಮಾವೇಶದ ಹೊತ್ತಿನಲ್ಲಿ ಇಂತಹ ಪ್ರಚೋದನಕಾರಿ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ತಕ್ಷಣವೇ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಸದ್ಯ ದೂರು ಸ್ವೀಕರಿಸಿರುವ ಬಸವಕಲ್ಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬಸವಕಲ್ಯಾಣದಲ್ಲಿ ನಾಳೆ ಬೃಹತ್ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಇಂತಹ ಯಾವುದೇ ಪ್ರಚೋದನಕಾರಿ ಪೋಸ್ಟ್‌ಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕಾಗಿ ವಿನಂತಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.