ಕಾರ್ಕಳ, ಜ. 14 : ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಾಪಟ್ಟಿರುವ ಘಟನೆ ಬಜಗೋಳಿಯ ಅಬ್ಬೆಂಜಾಲು ಬಳಿ ನಡೆದಿದೆ.
ಹೊಸ ವಿದ್ಯುತ್ ತಂತಿ ಅಳವಡಿಸುವ ವೇಳೆ ಸಿಡಿಲು ಬಡಿದು ಅಸ್ಸಾಂ ಮೂಲದ ಶಂಕರ್ (25) ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಾರ್ಕಳದಿಂದ ಬಜಗೋಳಿಗೆ ಹೊಸದಾಗಿ ವಿದ್ಯುತ್ ಲೈನ್ ಅಳವಡಿಸಲಾಗುತ್ತಿದ್ದು ಅಸ್ಸಾಂ ಮೂಲದ ಶಂಕರ್ ಹಾಗೂ ರುಬಾಂಗ್ (25) ಕಂಬವೇರಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಸಿಡಿಲು ಬಡಿದ ಪರಿಣಾಮ ಇಬ್ಬರೂ ಕಂಬದಿಂದ ನೆಲಕ್ಕುರುಳಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಶಂಕರ್ ಮೃತಪಟ್ಟಿರುತ್ತಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಇನ್ನು, ರುಬಾಂಗ್ ಎನ್ನುವವರು ಸದ್ಯ ಚೇತರಿಸಿಕೊಂಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.


