ಕಾರ್ಕಳ : ಸಿಡಿಲು ಬಡಿದು ಯುವಕ ಸಾವು – ಬೇಸಿಗೆಯಲ್ಲೂ ಮಳೆ, ಅವಘಡ…!

ಕಾರ್ಕಳ, ಜ. 14 : ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಾಪಟ್ಟಿರುವ ಘಟನೆ ಬಜಗೋಳಿಯ ಅಬ್ಬೆಂಜಾಲು ಬಳಿ ನಡೆದಿದೆ.

ಹೊಸ ವಿದ್ಯುತ್ ತಂತಿ ಅಳವಡಿಸುವ ವೇಳೆ ಸಿಡಿಲು ಬಡಿದು ಅಸ್ಸಾಂ ಮೂಲದ ಶಂಕರ್ (25) ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾರ್ಕಳದಿಂದ ಬಜಗೋಳಿಗೆ ಹೊಸದಾಗಿ ವಿದ್ಯುತ್ ಲೈನ್ ಅಳವಡಿಸಲಾಗುತ್ತಿದ್ದು ಅಸ್ಸಾಂ ಮೂಲದ ಶಂಕ‌ರ್ ಹಾಗೂ ರುಬಾಂಗ್ (25) ಕಂಬವೇರಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಸಿಡಿಲು ಬಡಿದ ಪರಿಣಾಮ ಇಬ್ಬರೂ ಕಂಬದಿಂದ ನೆಲಕ್ಕುರುಳಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಶಂಕರ್ ಮೃತಪಟ್ಟಿರುತ್ತಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಇನ್ನು, ರುಬಾಂಗ್ ಎನ್ನುವವರು ಸದ್ಯ ಚೇತರಿಸಿಕೊಂಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. 

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.