ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ- ಹೈಕೋರ್ಟ್

ಬೆಂಗಳೂರು, ಏ. 21 : ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ವರ್ಷ ಹಳೆ ಪದ್ಧತಿಯನ್ನೇ ಮುಂದುವರಿಸುವಂತೆ ಸೂಚನೆ ನೀಡಿದೆ.

Advertisement

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಂಬಂಧ 2025ರ ಅಕ್ಟೋಬರ್ 28ರಂದು ಸುತ್ತೋಲೆ ಹೊರಡಿಸಲಾಗಿದೆ. ಬಳಿಕ 2026ರ ಮಾರ್ಚ್ 18- ಏಪ್ರಿಲ್ 2 ರವರೆಗೆ ಪರೀಕ್ಷೆ ನಡೆದಿದೆ. ದಿನಪತ್ರಿಕೆ ವರದಿ ಆಧಾರದ ಮೇಲೆ ಅರ್ಜಿ ವಜಾ ಆಗಿದೆ ಎಂದು ವಾದಿಸಿದರು.

ಅದಕ್ಕೆ ನ್ಯಾಯಮೂರ್ತಿಗಳಾದ ಇಂದಿರೇಶ್, ನಿಮ್ಮ ಅಧಿಸೂಚನೆಯ ಉದ್ದೇಶ ಏನು? ಕಳೆದ ವರ್ಷ 1.75 ಲಕ್ಷ ವಿದ್ಯಾರ್ಥಿಗಳು ಫೇಲ್ ಆಗಿದ್ರು. ಎಲ್ಲರನ್ನೂ ಪಾಸ್ ಮಾಡೋದಾ ನಿಮ್ಮ ಅಧಿಸೂಚನೆ? ನಿಮ್ಮ ಉದ್ದೇಶ ಅದಾಗಿರೋದಿಲ್ಲ ಎಂದರು.

ಎಜಿ ಶಶಿಕಿರಣ್ ಶೆಟ್ಟಿ ವಾದಿಸಿ, ಫೇಲ್ ಆಗಿದರೆ ಒಳ್ಳೆಯ ಶಿಕ್ಷಕರರನ್ನು ನೇಮಕ ಮಾಡಿ. ಹಿಂದಿ ಭಾಷೆ ಕಲಿಯಲಿ ಬಿಡಿ. ತೃತೀಯ ಭಾಷೆ ಒಮ್ಮೆ ಕನ್ನಡವೂ ಆಗಿರಲಿದೆ ಅಲ್ವಾ. ಇಲ್ಲಿ ಹಿಂದಿ ತೃತೀಯ ಭಾಷೆ ವಿಚಾರಕ್ಕೆ ಗ್ರೇಡಿಂಗ್ ಸಿಸ್ಟಮ್ ತರಲಾಗಿದೆ. ಹಿಂದಿ ಭಾಷೆಯಿಂದ ವಿದ್ಯಾರ್ಥಿಗಳ ಮೇಲೆ ಹೊರೆ ಜಾಸ್ತಿಯಾಗಿದೆ. ನಾವು ಬೇರೆ ಸಬ್ಜೆಕ್ಟ್ಗಳ ಬಗ್ಗೆ ಹೇಳುತ್ತಿಲ್ಲ. ತೃತೀಯ ಭಾಷೆ ಹಿಂದಿ ಬಗ್ಗೆಯಷ್ಟೆ. ಶೇ.80 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರಿಂದ ಫೇಲ್ ಆಗ್ತಿದ್ದಾರೆ ಎಂದು ತಿಳಿಸಿದರು.

ಎಲ್ಲರನ್ನೂ ಪಾಸು ಮಾಡುವ ನಿಮ್ಮ ಉದ್ದೇಶ ಸರಿ ಇರಬಹುದು. ಅದು ಕೇಳಲು ಚೆನ್ನಾಗಿದೆ. ಈ ವರ್ಷ ಹೀಗೆ ಇರಲಿ. ಮುಂದಿನ ವರ್ಷದಿಂದ ನೀವು ಇದನ್ನು ಮಾಡಬಹುದು. ಮುಂದಿನ ವರ್ಷ ಅಗತ್ಯ ಕ್ರಮ ತೆಗೆದುಕೊಳ್ಳಬಹುದು ಅಲ್ವಾ ಎಂದು ನ್ಯಾಯಧೀಶರು, ಅಂಕಗಳನ್ನು ನೀಡಲು ನಿರ್ದೇಶಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.