ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ !

ಬೆಂಗಳೂರು, ಏ. 23 : ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ ಹಾಗೂ ಉತ್ತರ ಕನ್ನಡ 3ನೇ ಸ್ಥಾನ ಪಡೆದುಕೊಂಡಿದೆ. ಕಲಬುರಗಿ ಕೊನೆಯ ಸ್ಥಾನದಲ್ಲಿದೆ.

Advertisement

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ಬಾರಿ ಪರೀಕ್ಷೆ ಬರೆದ ಶೇಕಡಾ 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 5 ಸಾವಿರ ವಿದ್ಯಾರ್ಥಿಗಳು ಗೈರಾಗಿದ್ದರು. 7.7 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ವಾಟ್ಸ್‌ಆ್ಯಪ್‌/ಎಸ್‌ಎಂಎಸ್‌ ಮೂಲಕವೂ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗಿದೆ. ಜತೆಗೆ ಫಲಿತಾಂಶ ಪಟ್ಟಿಯು ಶಾಲೆಗಳಲ್ಲಿ ಮಧ್ಯಾಹ್ನ 12 ಗಂಟೆಗೆ ಲಭ್ಯವಾಗಿದೆ. ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ ಮೂಲಕ ನೀಡಲಾಗಿದೆ. ಅಲ್ಲಿಯೇ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಟಾಪ್‌ 5 ಜಿಲ್ಲೆಗಳು
ದಕ್ಷಿಣ ಕನ್ನಡ – ಶೇ 98.4
ಉಡುಪಿ – ಶೇ 98.18
ಉತ್ತರ ಕನ್ನಡ – ಶೇ 98.02
ಹಾಸನ – ಶೇ 97.51
ಮಂಡ್ಯ – ಶೇ 97.4

ಏಳು ವಿದ್ಯಾರ್ಥಿಗಳು 625 ಕ್ಕೆ 625 ಅಂಕ

ಈ ಬಾರಿ ಪರೀಕ್ಷೆಯಲ್ಲಿ ಏಳು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ್ದಾರೆ. ದಾವಣಗೆರೆಯ ಭರತ್‌, ರಾಯಚೂರಿನ ಸುಖದೇವ್, ಚಿಕ್ಕೋಡಿಯ ಪ್ರಾರ್ಥನಾ, ಚಿಕ್ಕಮಗಳೂರಿನ ಬೃಂದಾ, ಉಡುಪಿ ಪ್ರೀತಂ, ವಿಜಯಪುರದ ಸೌಜನ್ಯ, ಬೆಂಗಳೂರು ಉತ್ತರ ಧನುಷ್‌ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಅಧಿಕೃತ ವೆಬ್‌ಸೈಟ್ ಯಾವುದು?
https://karresults.nic.in/ ಲಿಂಕ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕಲ್ಮಂಜ : ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ – ಅರ್ಚಕರನ್ನು ಕಂಡು ಪರಾರಿಯಾದ ಕಳ್ಳರು !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ: ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹವನ್ನ ಭಿನ್ನಗೊಳಿಸಿದ ದುಷ್ಕರ್ಮಿ

ಕಡಬ, ಟಾಪ್ ಸುದ್ದಿಗಳು, ತಾಲೂಕು

ಕಡಬ : ಭಜನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ಧ ದೂರು

⚠️ Contents are protected on this website.