ಮನೆ ಸಮೀಪದಲ್ಲೇ ಬೀದಿ ನಾಯಿ ದಾಳಿ : ಬಾಲಕನಿಗೆ ಗಂಭೀರ ಗಾಯ

ಮಂಗಳೂರು : ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಬಾಲಕನೋರ್ವ ಗಾಯಗೊಂಡ ಘಟನೆ ಗುರುವಾರಂದು ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ನಡೆದಿದೆ. ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಬೀದಿ ನಾಯಿಗೆ ದಾಳಿಗೊಳಗಾದ ಬಾಲಕನೆಂದು ಗುರುತಿಸಲಾಗಿದೆ.

Advertisement

ಅಹಿಲ್ ಮನೆಗೆ ಹಿಂದಿರುಗುತ್ತಿ ಸಂದರ್ಭದಲ್ಲಿ ಈ ಘಟನೆ ನಡೆದಿದ್ದೆನ್ನಲಾಗಿದೆ. ಬೀದಿ ನಾಯಿಗಳ ಗುಂಪು ದಿಢೀರನೇ ಬಾಲಕನನ್ನು ಸುತ್ತುವರಿದು ದಾಳಿ ಮಾಡಿದ್ದು, ಬಾಲಕನ ಕೆನ್ನೆ ಮತ್ತು ಕೈಗೆ ಗಂಭೀರ ಗಾಯಗಳಾಗಿದೆ.

ಬಾಲಕನ ಬೊಬ್ಬೆ ಕೇಳಿದ ತಾಯಿ ತಕ್ಷಣ ಮನೆಯಿಂದ ಹೊರಗೆ ಓಡಿ ಬಂದು ಮಗನನ್ನು ರಕ್ಷಿಸಿದ್ದಾರೆ. ತಕ್ಷಣವೇ ಬಾಲಕನನ್ನು ಬಜ್ಪೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕಟೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.