ಶೃಂಗೇರಿಯ ಬಿಸಿಎಂ ಹಾಸ್ಟೆಲ್ ನಲ್ಲಿದ್ದ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಚಿಕ್ಕಮಗಳೂರು, ಡಿ. 17 : ಹೃದಯಾಘಾತ ಎಂಬ ಮಾರಕ ಕಾಯಿಲೆಯು ಇದೀಗ ಯುವ ಪೀಳಿಗೆಯನ್ನೇ ಬಲಿ ಪಡೆಯುತ್ತಿದೆ. ಏಕಾಏಕಿ ಹೃದಯಾಘಾತಕ್ಕೆ ಯುವ ಸಮುದಾಯ ಬಲಿಯಾಗುತ್ತಿದೆ. ಬಾಳಿ ಬೆಳಕಾಗಬೇಕಾದವರು ಇಂದು ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.

Advertisement

ಮೃತ ವಿದ್ಯಾರ್ಥಿನಿಯನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ, ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಹೃದಯಾಘಾತ ಎಂಬುದು ವೈದ್ಯಕೀಯ ಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಣ್ಣ ಪ್ರಾಯದವರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಸಮಾಜದ ಆತಂಕಕ್ಕೂ ಕಾರಣವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.