ಮಣಿಪಾಲ : ಹೊರಗಡೆ ಊಟಮಾಡಿ ರೂಂ’ಗೆ ತೆರಳಿದ್ದ ವಿದ್ಯಾರ್ಥಿನಿಗೆ ಏಕಾಏಕಿ ಬೆನ್ನು ನೋವು – ಕೆಲವೇ ಕ್ಷಣದಲ್ಲಿ ಸಾವು

ಸಾಂಧರ್ಭಿಕ ಚಿತ್ರ

ಮಣಿಪಾಲ : ಹಠಾತ್ ಬೆನ್ನು ನೋವು ಕಾಣಿಸಿಕೊಂಡು ವಿದ್ಯಾರ್ಥಿನಿಯೋರ್ವಳು ಕೊನೆಯುಸಿರೆಳೆದಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಒಡಿಶಾ ಮೂಲದ ಖಾಸಗಿ ಕಾಲೇಜಿನ ಎಂಜಿನಿರಿಂಗ್ ವಿದ್ಯಾರ್ಥಿನಿ ಆಕಾಂಕ್ಷಾ ಮೋಹಾಂತಿ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ.

Advertisement

ನ. 29ರಂದು ರಾತ್ರಿ ವೇಳೆ ಮಣಿಪಾಲದ ಹೊಟೇಲೊಂದರಲ್ಲಿ ಊಟ ಮಾಡಿ ವಾಸ್ತವ್ಯದ ಕೊಠಡಿಗೆ ತೆರಳಿದ ಆಕೆಗೆ ಏಕಾಏಕಿ ಗಂಭೀರ ಸ್ವರೂಪದಲ್ಲಿ ಬೆನ್ನು ನೋವು ಕಾಣಿಸಿಕೊಂಡಿತು. ನಡೆದಾಡಲೂ ಸಾಧ್ಯವಾಗದ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಸ್ನೇಹಿತರು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಯುವತಿ ಈಗಾಗಲೇ ಕೊನೆಯುಸಿರೆಳೆದಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಇನ್ನು, ಈಕೆಯ ಸಾವಿಗೆ ಸ್ಪಷ್ಟ ಕಾರಣ ಏನು ಎಂದು ತಿಳಿದುಬಂದಿಲ್ಲ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.