ಸುಳ್ಯ : ಆತ್ಮಹತ್ಯೆಗೆ ಯತ್ನಿಸುವಾಗ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು !

ಸುಳ್ಯ, ಡಿ. 09 : ಆತ್ಮಹತ್ಯೆಗೆ ಪ್ರಯತ್ನಿಸಿ ನೇಣು ಬಿಗಿದು, ಜಿಗಿದ ಸಂದರ್ಭ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕಲ್ಲುಗುಂಡಿ ಎಂಬಲ್ಲಿ ನಡೆದಿದೆ.

Advertisement

ಕಲ್ಲುಗುಂಡಿ ಕೂಲಿಶೆಡ್‌ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60) ಮೃತರು ಎಂದು ಗುರುತಿಸಲಾಗಿದೆ. ಮೃತರು ಬಾಡಿಗೆ ರೂಮಿನಲ್ಲಿ ಡಿ. 5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು, ಕೆಳಕ್ಕೆ ಜಿಗಿದ ಸಂದರ್ಭ ಕೇಬಲ್ ತುಂಡಾಗಿ ನೆಲಕ್ಕೆ ಬಿದ್ದು ತಲೆಗೆ ಗಾಯವಾಗಿತ್ತು. ಅವರು ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.