ಸುಳ್ಯ, ಡಿ. 20 : ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯನ್ನು ಬೆಂಗಳೂರಿನಲ್ಲಿ ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದ್ದು, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿಗಳಾದ ರಮೇಶ್ ಹಾಗೂ ಶ್ರೀಶೈಲ ಅವರು ಗುರುವಾರ ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

