ರಾಜ್ಯದಲ್ಲಿ ಎರಡು ತಿಂಗಳಿನಿಂದ ಶಾಸನ ಇಲ್ಲದ ದುಶ್ಯಾಸನ ಆಡಳಿತ ನಡೆಯುತ್ತಿದೆ : ಸುನಿಲ್ ಕುಮಾರ್

ಉಡುಪಿ : ರಾಜ್ಯದಲ್ಲಿ ಆಡಳಿತಕ್ಕಿಂತ ಹೆಚ್ಚಾಗಿ ಕುರ್ಚಿ ಕದನ ನಡೆಯುತ್ತಿದ್ದು, ಶೇ. 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಹಾಗೂ ಡಿಸಿಎಂ ಹೊಸದಿಲ್ಲಿಗೆ ಸೀಮಿತರಾಗಿದ್ದಾರೆ. ಇಡೀ ರಾಜ್ಯದಲ್ಲಿ ಎರಡು ತಿಂಗಳಿನಿಂದ ಶಾಸನ ಇಲ್ಲದ ದುಶ್ಯಾಸನ ಆಡಳಿತ ನಡೆಯುತ್ತಿದೆ ಎಂದು ಶಾಸಕ ವಿ.ಸುನಿಲ್ ಕುಮಾರ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Advertisement

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲಾಗುವುದು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬಗ್ಗೆ ಯಾವುದೇ ವಿಶ್ವಾಸವಿಲ್ಲ. ಸದನದಲ್ಲಿ ನಾವು ವಿಶ್ವಾಸ ಮತವನ್ನು ಯಾಚಿಸುತ್ತೇವೆ ಎಂದರು. ಬಿಜೆಪಿ ಯಾವುದೇ ಕಾರಣಕ್ಕೂ ಸರಕಾರ ರಚನೆ ಮಾಡಲು ಮುಂದಾಗಲ್ಲ. ಕಾಂಗ್ರೆಸ್ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು ನೋಡುತ್ತಿದ್ದೇವೆ. ಉಪಮುಖ್ಯಮಂತ್ರಿಗಳ ಜತೆ 140 ಜನ ಎಲ್ಲಿದ್ದಾರೆ? ರಾಹುಲ್ ಗಾಂಧಿ ಹಾಗೂ ಸಿಎಂ ಅವರ ಜತೆಯಲ್ಲಿಯೂ ಯಾರೂ ಇಲ್ಲ ಎಂದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.