ರಾಜ್ಯದಲ್ಲಿ ಎರಡು ತಿಂಗಳಿನಿಂದ ಶಾಸನ ಇಲ್ಲದ ದುಶ್ಯಾಸನ ಆಡಳಿತ ನಡೆಯುತ್ತಿದೆ : ಸುನಿಲ್ ಕುಮಾರ್

ಉಡುಪಿ : ರಾಜ್ಯದಲ್ಲಿ ಆಡಳಿತಕ್ಕಿಂತ ಹೆಚ್ಚಾಗಿ ಕುರ್ಚಿ ಕದನ ನಡೆಯುತ್ತಿದ್ದು, ಶೇ. 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಹಾಗೂ ಡಿಸಿಎಂ ಹೊಸದಿಲ್ಲಿಗೆ ಸೀಮಿತರಾಗಿದ್ದಾರೆ. ಇಡೀ ರಾಜ್ಯದಲ್ಲಿ ಎರಡು ತಿಂಗಳಿನಿಂದ ಶಾಸನ ಇಲ್ಲದ ದುಶ್ಯಾಸನ ಆಡಳಿತ ನಡೆಯುತ್ತಿದೆ ಎಂದು ಶಾಸಕ ವಿ.ಸುನಿಲ್ ಕುಮಾರ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Advertisement

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲಾಗುವುದು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬಗ್ಗೆ ಯಾವುದೇ ವಿಶ್ವಾಸವಿಲ್ಲ. ಸದನದಲ್ಲಿ ನಾವು ವಿಶ್ವಾಸ ಮತವನ್ನು ಯಾಚಿಸುತ್ತೇವೆ ಎಂದರು. ಬಿಜೆಪಿ ಯಾವುದೇ ಕಾರಣಕ್ಕೂ ಸರಕಾರ ರಚನೆ ಮಾಡಲು ಮುಂದಾಗಲ್ಲ. ಕಾಂಗ್ರೆಸ್ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು ನೋಡುತ್ತಿದ್ದೇವೆ. ಉಪಮುಖ್ಯಮಂತ್ರಿಗಳ ಜತೆ 140 ಜನ ಎಲ್ಲಿದ್ದಾರೆ? ರಾಹುಲ್ ಗಾಂಧಿ ಹಾಗೂ ಸಿಎಂ ಅವರ ಜತೆಯಲ್ಲಿಯೂ ಯಾರೂ ಇಲ್ಲ ಎಂದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.