ಉಜಿರೆ : ದೇವಸ್ಥಾನವೊಂದರ ಕಾಮಗಾರಿ ವೇಳೆ ತಡೆಗೋಡೆ ಕುಸಿತ – ಓರ್ವ ಕಾರ್ಮಿಕ ಸಾವು

ಉಜಿರೆ, ಜ. 31 : ದೇವಸ್ಥಾನವೊಂದರ ಕಾಮಗಾರಿ ಸಂದರ್ಭದಲ್ಲಿ ತಡೆಗೋಡೆ ಏಕಾಏಕಿ ಕುಸಿದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಬಿಹಾರ ಮೂಲದ ರಾಕೇಶ್ ಕುಮಾರ್(25) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ.

Advertisement

ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ತಡೆಗೋಡೆ ಕುಸಿದಿದೆ ಎನ್ನಲಾಗಿದೆ. ಈ ವೇಳೆ ಕಾರ್ಮಿಕ ರಾಕೇಶ್ ಕುಮಾರ್ (25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.