ಸುಳ್ಯ : ಮೂರು ವರ್ಷದ ತನ್ನ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ತಾಯಿ ಆತ್ಮಹತ್ಯೆ !

Shallow depth of field image taken of yellow law enforcement line with police car and lights in the background.

ಸುಳ್ಯ, ಜ. 05 : ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ನಡೆದಿದೆ.

Advertisement

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು ಎಂದು ಗುರುತಿಸಲಾಗಿದೆ. ಹರೀಶ್ ಅವರು ತನ್ನ ತಂದೆ, ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ರವಿವಾರ ಬೆಳಗ್ಗೆ ಕಾಣದೇ ಇದ್ದ ಸಂದರ್ಭ ಹುಡುಕಾಡಿದಾಗ ಮನೆ ಸಮೀಪದ, ಬೇರೆಯವರ ಜಾಗದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮಧುಶ್ರೀ ಅವರು ಮಗುವನ್ನು ಬಟ್ಟೆಯಲ್ಲಿ ತನ್ನ ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಪುತ್ತೂರು ಬೆಟಗೇರಿಯವರಾದ ಮಧುಶ್ರೀ ಅವರು ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.