ಬೆಳ್ತಂಗಡಿ, ಏ. 22 : ಕನ್ಯಾಡಿ ಗ್ರಾಮದ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಕಳ್ಳರು ಕೈಚಳಕ ಮೆರೆದಿರುವ ಘಟನೆ ವರದಿಯಾಗಿದೆ.

ಏಪ್ರಿಲ್ 21ರಂದು ಪೂಜೆ ಮುಗಿದ ಬಳಿಕ ದೇವಸ್ಥಾನದ ಬಾಗಿಲು ಹಾಕಿ ಹೋಗಲಾಗಿತ್ತು. ಇಂದು ಬೆಳಗ್ಗೆ ದೇವಸ್ಥಾನಕ್ಕೆ ಸಿಬ್ಬಂದಿಗಳು ಬಂದ ಸಂದರ್ಭದಲ್ಲಿ ಬಾಗಿಲು ಹೊಡೆದಿರುವುದು ಕಂಡು ಬಂದಿದೆ. ತಕ್ಷಣವೇ ದೇವಸ್ಥಾನದ ಒಳಗೆ ಹೋಗಿ ನೋಡಿದಾಗ ಕಾಣಿಕೆ ಹುಂಡಿ ಕಳವುಗೈದಿರುವುದು ಬೆಳಕಿಗೆ ಬಂದಿದೆ.

ಒಟ್ಟು 5 ಕಾಣಿಕೆ ಹುಂಡಿಗಳನ್ನು ಕಳವುಗಯ್ಯಳಾಗಿದ್ದು ಅದನ್ನ ದೇವಸ್ಥಾನ ಮುಂಭಾಗದ ನೇತ್ರಾವತಿ ನದಿ ತೀರದಲ್ಲಿ ಕಾಣಿಕೆ ಹುಂಡಿಗಳನ್ನು ಹೊಡೆದು, ಅದರಲ್ಲಿದ್ದ ಹಣವನ್ನ ದೋಚಿ ಎಸೆದು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

