ಪುತ್ತೂರು, ಜು. 7 : ಯುವಕನೊಬ್ಬ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇರ್ದೆ ಗ್ರಾಮದ ಮಣ್ಣಾಪು ಎಂಬಲ್ಲಿ ನಡೆದಿದೆ.
ಇರ್ದೆ ಗ್ರಾಮದ ಮಣ್ಣಾಪು ನಿವಾಸಿ ಗಂಗಾಧರ ಮಡಿವಾಳರವರ ಪುತ್ರ ತಿಲಕ್ (18ವ.)ರವರು ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಯುವಕ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ತಂದೆ ಗಂಗಾಧರ ಮಡಿವಾಳ, ತಾಯಿ ಮಮತಾ ಹಾಗೂ ಸಹೋದರಿಯನ್ನು ಅಗಲಿದ್ದಾರೆ.


