ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರದ್ದುಪಡಿಸಿ ಹೈಕೋರ್ಟ್ ಆದೇಶ

Advertisement

ಬೆಂಗಳೂರು: ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಮಾಡಿದೆ.

Advertisement

ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು. ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶ ರದ್ದುಪಡಿಸಿ‌ಆದೇಶ ನೀಡಿದೆ. ಅಲ್ಲದೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆಯೂ ಎರಡನೇ ಪ್ರತಿವಾದಿಯಾದ ಪುತ್ತೂರು ಸಹಾಯಕ ಆಯುಕ್ತರಿಗೆ ನ್ಯಾಯಪೀಠ ನಿರ್ದೇಶಿಸಿದೆ ಎಂದು ಮಾಹಿತಿ ಲಭ್ಯವಾಗುತ್ತಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ