ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಎಲ್‌ಪಿಜಿ ಟ್ಯಾಂಕರ್ : ಐವರು ದುರ್ಮರಣ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Advertisement

ನವದೆಹಲಿ, ಜು. 03 : ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಾಗಿಸುತ್ತಿದ್ದ ಟ್ಯಾಂಕರ್ ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದು ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಇತ್ತೀಚೆಗೆ ಸಂಭವಿಸಿದ್ದ ಈ ಅಪಘಾತದ ಸಿಸಿಟಿವಿ ದೃಶ್ಯಾವಳಿ ಇದೀಗ ಬಹಿರಂಗವಾಗಿದೆ.

Advertisement

ಸುಮಾರು 24 ಸೆಕೆಂಡುಗಳ ಸಿಸಿಟಿವಿ ವಿಡಿಯೊದಲ್ಲಿ ಎರಡು ಟ್ಯಾಂಕರ್‌ಗಳು ಟೋಲ್ ಪ್ಲಾಜಾ ಕಡೆಗೆ ಬರುತ್ತಿರುವುದು ಕಾಣಿಸುತ್ತದೆ. ಈ ವೇಳೆ ಒಂದು ಟ್ಯಾಂಕರ್ ಇದ್ದಕ್ಕಿದ್ದಂತೆ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ನೇರವಾಗಿ ಟೋಲ್ ಬೂತ್‌ಗೆ ನುಗ್ಗಿದೆ.

Advertisement

ಡಿಕ್ಕಿಯ ಬಳಿಕ ಟ್ಯಾಂಕರ್‌ನಿಂದ ಎಲ್‌ಪಿಜಿ ಅನಿಲ ಸೋರಿಕೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಟೋಲ್ ಪ್ಲಾಜಾ ಪ್ರದೇಶ ಹೊತ್ತಿ ಉರಿದಿದ್ದು, ದಟ್ಟ ಹೊಗೆ ಆವರಿಸಿತು. ಬೆಂಕಿಯ ಜ್ವಾಲೆಗಳು ಸುಮಾರು ಎರಡು ಕಿಲೋಮೀಟರ್ ದೂರದಿಂದಲೂ ಗೋಚರಿಸುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲೆಯ ಎಲ್ಲಾ ಅಗ್ನಿಶಾಮಕ ದಳದ ಘಟಕಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅಪಘಾತದಲ್ಲಿ ಟ್ಯಾಂಕರ್ ಚಾಲಕ 40 ವರ್ಷದ ಧರ್ಮೇಂದ್ರ ದುಬೆ ಹಾಗೂ ಟೋಲ್ ಪ್ಲಾಜಾ ಸಿಬ್ಬಂದಿ ಅಲೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇತರ ಟೋಲ್ ಸಿಬ್ಬಂದಿಯಲ್ಲಿ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಐದಕ್ಕೇರಿದೆ.

ಘಟನೆಯ ಬಳಿಕ ಸಂಚಾರ ದಟ್ಟಣೆ ತಪ್ಪಿಸಲು ಟೋಲ್ ಪ್ಲಾಜಾ ಮೂಲಕ ವಾಹನಗಳನ್ನು ತಾತ್ಕಾಲಿಕವಾಗಿ ಶುಲ್ಕವಿಲ್ಲದೆ ಸಂಚರಿಸಲು ಅಧಿಕಾರಿಗಳು ಅವಕಾಶ ಮಾಡಿಕೊಟ್ಟರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣದ ತನಿಖೆಗಾಗಿ ತಾಂತ್ರಿಕ ತಜ್ಞರ ತಂಡವನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ಇತರೆ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ