ಚೆನ್ನೈ : ಡಿಎಂಕೆ, ಎಐಎಡಿಎಂಕೆ ಸರ್ಕಾರ ರಚಿಸಲು ಸಿದ್ಧತೆ – ಟಿವಿಕೆಯ 107 ಶಾಸಕರು ಸಾಮೂಹಿಕ ರಾಜೀನಾಮೆ ಅಸ್ತ್ರ !

ಚೆನ್ನೈ, ಮೇ. 08 : ತಮಿಳುನಾಡಿನ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಸೃಷ್ಟಿಯಾಗಿರುವ ರಾಜಕೀಯ ಅನಿಶ್ಚಿತತೆ ಈಗ ಸ್ಫೋಟಕ ಹಂತಕ್ಕೆ ತಲುಪಿದೆ. ಡಿಎಂಕೆ ಅಥವಾ ಎಐಎಡಿಎಂಕೆ ಸರ್ಕಾರ ರಚಿಸಲು ಮುಂದಾದರೆ, ತಮ್ಮ ಪಕ್ಷದ ಎಲ್ಲಾ 107 ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಎಚ್ಚರಿಸಿದೆ.

Advertisement

‘ದಳಪತಿ’ ವಿಜಯ್‌ಗೆ ದ್ರಾವಿಡ ಪಕ್ಷಗಳ ಭೀತಿ?

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಬಹುಮತಕ್ಕೆ ಬೇಕಾದ 118ರ ಗಡಿ ದಾಟಲು ಪಕ್ಷಕ್ಕೆ ಇನ್ನೂ 6 ಸ್ಥಾನಗಳ ಕೊರತೆಯಿದೆ. ಈ ನಡುವೆ, ವಿಜಯ್ ಅವರನ್ನು ಅಧಿಕಾರದಿಂದ ದೂರವಿಡಲು ದಶಕಗಳ ಕಾಲ ಪರಸ್ಪರ ವೈರಿಗಳಾಗಿದ್ದ ಡಿಎಂಕೆ (59 ಸ್ಥಾನ) ಮತ್ತು ಎಐಎಡಿಎಂಕೆ (47 ಸ್ಥಾನ) ತೆರೆಯ ಮರೆಯಲ್ಲಿ ಕೈಜೋಡಿಸುತ್ತಿವೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ಈ ರಾಜೀನಾಮೆ ಅಸ್ತ್ರವನ್ನು ಪ್ರಯೋಗಿಸಲು ಟಿವಿಕೆ ನಿರ್ಧರಿಸಿದೆ.
ಅತಿ ದೊಡ್ಡ ಪಕ್ಷವನ್ನು ಬಿಟ್ಟು, ಸೋತಿರುವ ದ್ರಾವಿಡ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಅಂತಹ ಸರ್ಕಾರಕ್ಕೆ ಮಾನ್ಯತೆ ಇರುವುದಿಲ್ಲ ಎಂಬುದು ವಿಜಯ್ ಬೆಂಬಲಿಗರ ವಾದ.
ಸಂಖ್ಯಾಬಲದ ಲೆಕ್ಕಾಚಾರ: ವಿಜಯ್ ಅವರು ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದು, ಒಂದು ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪಕ್ಷದ ಬಲ 107 ಆಗಲಿದೆ. ಕಾಂಗ್ರೆಸ್‌ನ 5 ಶಾಸಕರ ಬೆಂಬಲವಿದ್ದರೂ ಟಿವಿಕೆ ಬಲ 112ಕ್ಕೆ ನಿಲ್ಲಲಿದೆ. “ಜನಾದೇಶ ಅತಂತ್ರವಾಗಿರಬಹುದು, ಆದರೆ ಅತಿ ದೊಡ್ಡ ಪಕ್ಷವನ್ನು ನಿರ್ಲಕ್ಷಿಸುವುದು ಪ್ರಜಾಪ್ರಭುತ್ವಕ್ಕೆ ವಿರೋಧ,” ಎಂದು ಟಿವಿಕೆ ಹಿರಿಯ ನಾಯಕರು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸಾಥ್; ಇತರರ ಮೇಲೆ ಕಣ್ಣು

ಸದ್ಯಕ್ಕೆ ಕಾಂಗ್ರೆಸ್ ಪಕ್ಷವು ವಿಜಯ್‌ಗೆ ಬೆಂಬಲ ಸೂಚಿಸಿದೆ. ಆದರೆ ಡಿಎಂಕೆಯ ಹಳೆಯ ಮಿತ್ರಪಕ್ಷಗಳಾದ ವಿಜಿಸಿ, ಎಡಪಕ್ಷಗಳು ಮತ್ತು ಐಯುಎಂಎಲ್ ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಇವರನ್ನು ಸೆಳೆಯಲು ವಿಜಯ್ ತಂಡ ಕಸರತ್ತು ನಡೆಸುತ್ತಿರುವಾಗಲೇ ಡಿಎಂಕೆ-ಎಐಎಡಿಎಂಕೆ ಮೈತ್ರಿಯ ವದಂತಿಗಳು ಇಡೀ ಚಿತ್ರಣವನ್ನೇ ಬದಲಿಸಿವೆ. ಒಂದು ವೇಳೆ ಟಿವಿಕೆ ಶಾಸಕರು ಸಾಮೂಹಿಕ ರಾಜೀನಾಮೆ ನೀಡಿದರೆ, ರಾಜ್ಯದಲ್ಲಿ ಮತ್ತೆ ರಾಷ್ಟ್ರಪತಿ ಆಳ್ವಿಕೆ ಅಥವಾ ಮರು ಚುನಾವಣೆ ಎದುರಾಗುವ ಸಾಧ್ಯತೆಗಳಿವೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

⚠️ Contents are protected on this website.