ಉಪ್ಪಿನಂಗಡಿ : ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಓರ್ವ ಆರೋಪಿ ಸೆರೆ

ಉಪ್ಪಿನಂಗಡಿ, ಜ. 06 : ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸಲಾಗುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿರುವ ಘಟನೆ ಕಜೆಕ್ಕಾರ್ ಗುಡ್ಡ ಎಂಬಲ್ಲಿ ನಡೆದಿದೆ. ಮೂರು ಕೋಳಿ, ಮೂರು ದ್ವಿಚಕ್ರ ವಾಹನ ಸಹಿತ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

Advertisement

ಉರುವಾಲು ಗ್ರಾಮದ ನೋಣಯ್ಯ ಮುಗೇರ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಿಂದ ಪೊಲೀಸ್ ದಾಳಿಯ ವೇಳೆ ಪರಾರಿಯಾದವರನ್ನು ವಿಜಯ ಕಜೆಕ್ಕಾರ್, ರವಿ ಕಜೆಕ್ಕಾರ್, ಉದಯ ಪೆರಿಯಡ್ಕ ಮತ್ತು ಇತರ ಇಬ್ಬರು ಎಂದು ಗುರುತಿಸಲಾಗಿದೆ.

ಬಂಧಿತನಿಂದ ಕೋಳಿ ಅಂಕಕ್ಕೆ ಬಳಸಲಾಗುತ್ತಿರುವ ಸಲಕರಣೆಗಳನ್ನು ಜೂಜಿಗೆ ಬಳಸಲಾಗಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದು, ಪೊಲೀಸ್ ಉಪ ನಿರೀಕ್ಷಕ ಸುರೇಶ್ ಸಿ ಟಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಏಕಾಏಕಿ ಅಸ್ವಸ್ಥಗೊಂಡ ಪ್ರಯಾಣಿಕ – ಬಸ್ ಅನ್ನು ಆಸ್ಪತ್ರೆಗೆ ಸಾಗಿಸಿ, ಮಾನವೀಯತೆ ಮೆರೆದ ಬಸ್ ಸಿಬ್ಬಂದಿ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

⚠️ Contents are protected on this website.