ಉಪ್ಪಿನಂಗಡಿ, ಜ. 06 : ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸಲಾಗುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿರುವ ಘಟನೆ ಕಜೆಕ್ಕಾರ್ ಗುಡ್ಡ ಎಂಬಲ್ಲಿ ನಡೆದಿದೆ. ಮೂರು ಕೋಳಿ, ಮೂರು ದ್ವಿಚಕ್ರ ವಾಹನ ಸಹಿತ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಉರುವಾಲು ಗ್ರಾಮದ ನೋಣಯ್ಯ ಮುಗೇರ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಿಂದ ಪೊಲೀಸ್ ದಾಳಿಯ ವೇಳೆ ಪರಾರಿಯಾದವರನ್ನು ವಿಜಯ ಕಜೆಕ್ಕಾರ್, ರವಿ ಕಜೆಕ್ಕಾರ್, ಉದಯ ಪೆರಿಯಡ್ಕ ಮತ್ತು ಇತರ ಇಬ್ಬರು ಎಂದು ಗುರುತಿಸಲಾಗಿದೆ.
ಬಂಧಿತನಿಂದ ಕೋಳಿ ಅಂಕಕ್ಕೆ ಬಳಸಲಾಗುತ್ತಿರುವ ಸಲಕರಣೆಗಳನ್ನು ಜೂಜಿಗೆ ಬಳಸಲಾಗಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದು, ಪೊಲೀಸ್ ಉಪ ನಿರೀಕ್ಷಕ ಸುರೇಶ್ ಸಿ ಟಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

