ಉಡುಪಿ : ಶ್ರೀಕೃಷ್ಣ ಮಠ ಭೇಟಿ, ದೇವರ ದರ್ಶನ ಹಾಗೂ ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿಯಾಗುವ ಹಿನ್ನಲೆಯಲ್ಲಿ ಇಂದು ನರೇಂದ್ರ ಮೋದಿ ಉಡುಪಿಗೆ ಈಗಾಗಲೇ ಆಗಮಿಸಿದ್ದಾರೆ. ಆದಿ ಉಡುಪಿಯ ಹೆಲಿಪ್ಯಾಡ್ ನಲ್ಲಿ ಬಂದಿಳಿವ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ದೊರಕಿದೆ. ಬನ್ನಂಜೆಯಿಂದ ಕಲ್ಸಂಕ ತನಕ ಕಾರಿನಲ್ಲಿ ಇಕ್ಕೆಲಗಳಲ್ಲಿರುವ ಸಾವಿರಾರು ಜನರತ್ತ ಕೈ ಬೀಸುತ್ತಾ ಪ್ರಧಾನಿ ಮೋದಿ ಸಾಗಿದ್ದಾರೆ, ತಮ್ಮ ನೆಚ್ಚಿನ ನಾಯಕನತ್ತ ಸಾವಿರಾರು ಮಂದಿ ಪುಷ್ಪಾರ್ಚನೆಗೈದು ಸ್ವಾಗತಿಸಿದ್ದಾರೆ.
ರೋಡ್ ಶೋ ನಲ್ಲಿ ಸಾಗಿ ಆ ಬಳಿಕ ಶ್ರೀಕೃಷ್ಣ ಮಠ ಭೇಟಿ ನೀಡಿ ದೇವರ ದರ್ಶನ ಮಾಡಲಿದ್ದಾರೆ. ಆ ಬಳಿಕ ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿಯಾಗಿ ಲಕ್ಷಾಂತರ ಮಂದಿಯನ್ನುದ್ಧೇಶಿಸಿ ಮಾತನಾಡಲಿದ್ದಾರೆ.

