ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ : ಸಾವಿರಾರು ಮಂದಿಯಿಂದ ಪುಷ್ಪಾರ್ಚನೆ

ಉಡುಪಿ : ಶ್ರೀಕೃಷ್ಣ ಮಠ ಭೇಟಿ, ದೇವರ ದರ್ಶನ ಹಾಗೂ ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿಯಾಗುವ ಹಿನ್ನಲೆಯಲ್ಲಿ ಇಂದು ನರೇಂದ್ರ ಮೋದಿ ಉಡುಪಿಗೆ ಈಗಾಗಲೇ ಆಗಮಿಸಿದ್ದಾರೆ. ಆದಿ ಉಡುಪಿಯ ಹೆಲಿಪ್ಯಾಡ್‌ ನಲ್ಲಿ ಬಂದಿಳಿವ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ದೊರಕಿದೆ. ಬನ್ನಂಜೆಯಿಂದ ಕಲ್ಸಂಕ ತನಕ ಕಾರಿನಲ್ಲಿ ಇಕ್ಕೆಲಗಳಲ್ಲಿರುವ ಸಾವಿರಾರು ಜನರತ್ತ ಕೈ ಬೀಸುತ್ತಾ ಪ್ರಧಾನಿ ಮೋದಿ ಸಾಗಿದ್ದಾರೆ, ತಮ್ಮ ನೆಚ್ಚಿನ ನಾಯಕನತ್ತ ಸಾವಿರಾರು ಮಂದಿ ಪುಷ್ಪಾರ್ಚನೆಗೈದು ಸ್ವಾಗತಿಸಿದ್ದಾರೆ.

Advertisement

ರೋಡ್ ಶೋ ನಲ್ಲಿ ಸಾಗಿ ಆ ಬಳಿಕ ಶ್ರೀಕೃಷ್ಣ ಮಠ ಭೇಟಿ ನೀಡಿ ದೇವರ ದರ್ಶನ ಮಾಡಲಿದ್ದಾರೆ. ಆ ಬಳಿಕ ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿಯಾಗಿ ಲಕ್ಷಾಂತರ ಮಂದಿಯನ್ನುದ್ಧೇಶಿಸಿ ಮಾತನಾಡಲಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.