ಉಜಿರೆ : ಜಗದ್ವಿಖ್ಯಾತಿ ಪುಣ್ಯಕ್ಷೇತ್ರ ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಇಂದು ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ಶ್ರೀ ಮಂಜುನಾಥೇಶ್ವರ ಪಾದಯಾತ್ರೆ ಸಮಿತಿ ವತಿಯಿಂದ 13ನೇ ವರ್ಷದ ಪಾದಯಾತ್ರೆಯು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಳದ ವಠಾರದಿಂದ ಆರಂಭಗೊಂಡಿದೆ.


ಶ್ರೀ ಜನಾರ್ಧನ ದೇವಸ್ಥಾನದ ವಠಾರದಿಂದ ವೈಭವದ ಪಾದಯಾತ್ರೆಗೆ ಚಾಲನೆ ದೊರೆತಿದೆ. ಸಹಸ್ರಾರು ಭಕ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಉಜಿರೆ-ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಯಾತ್ರೆ ಸಾಗಿ, ಧರ್ಮಸ್ಥಳ ದೇವಸ್ಥಾನಕ್ಕೆ ತಲುಪಲಿದೆ. ಈ ಸಂದರ್ಭ ಶ್ರೀ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಶ್ರೀ ಪ್ರತಾಪ್ ಸಿಂಹ್ ನಾಯಕ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

