ಉಜಿರೆ-ಪೆರಿಯಶಾಂತಿ ಸ್ಟರ್ ರಸ್ತೆ ಕಾಮಗಾರಿಗೆ ನ.22 ರಂದು ಶಿಲಾನ್ಯಾಸ – ಧರ್ಮಸ್ಥಳದಲ್ಲಿ ನಿರ್ಮಾಣವಾಗಲಿದೆ ಬೆಂಗಳೂರು ಮಾದರಿಯ ಅಂಡರ್ ಪಾಸ್

ಉಜಿರೆ : ಉಜಿರೆ- ಪೆರಿಯಶಾಂತಿ ಸ್ಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನ.22 ರಂದು ಬೆಳಗ್ಗೆ 9:30ಕ್ಕೆ ಉಜಿರೆಯ ದ್ವಾರದ ಬಳಿಯ ಬಸ್ ನಿಲ್ದಾಣ ಬಳಿ ಶಿಲಾನ್ಯಾಸ ನಡೆಯಲಿದೆ. 614 ಕೋಟಿ ರೂ. ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಇಲಾಖೆಯ ಹೆದ್ದಾರಿಗಳ ನಿರ್ವಹಣೆ ಯೋಜನೆಯಲ್ಲಿ 30 ಕಿ.ಮೀ. ವ್ಯಾಪ್ತಿಯ ಈ ಸ್ಟರ್ ರಸ್ತೆ ಅಭಿವೃದ್ಧಿ ಹೊಂದಲಿದೆ. ಕಾಮಗಾರಿಯಲ್ಲಿ ರಸ್ತೆ ವಿಸ್ತರಣೆಗೊಳ್ಳಲಿದ್ದು, ಸುಸಜ್ಜಿತ ಚರಂಡಿಗಳು, ಅಗತ್ಯ ಸ್ಥಳಗಳಲ್ಲಿ ಕಿರು ಸೇತುವೆ, ಸೇತುವೆಗಳು, ಧರ್ಮಸ್ಥಳದ ಮುಖ್ಯದ್ವಾರದ ಬಳಿ ಬೆಂಗಳೂರು ಮೆಜೆಸ್ಟಿಕ್ ಮಾದರಿಯ ಅಂಡರ್ ಪಾಸ್, ರಾತ್ರಿಯ ಸಂಚಾರ ಸುರಕ್ಷತೆಗೆ ಪೇಟೆ ಪ್ರದೇಶಗಳಲ್ಲಿ ವಿಶೇಷ ವಿದ್ಯುತ್ ದೀಪಗಳ ಅಳವಡಿಕೆಯಾಗಲಿದೆ. ಈ ರಸ್ತೆಯು 4 ವರ್ಷಗಳ ಹಿಂದೆ ರಾಜ್ಯ ಹೆದ್ದಾರಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರಗೊಂಡಿದೆ. ಬಳಿಕ ಸಾಕಷ್ಟು ಸಮೀಕ್ಷೆಗಳು ನಡೆದಿವೆ. ಉಜಿರೆ- ಪೆರಿಯಶಾಂತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗಾಗಿ ಮರಗಳು ತೆರವುಗೊಳ್ಳಬೇಕಾಗಿದ್ದು ಅವುಗಳ ಲೆಕ್ಕಾಚಾರ ಪೂರ್ಣಗೊಂಡಿದೆ.

Advertisement

ಐತಿಹಾಸಿಕ ಕ್ಷೇತ್ರಗಳನ್ನು ಸಂಪರ್ಕಿಸುವ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಅಥವಾ ಒಂದು ರಾಷ್ಟ್ರೀಯ ಹೆದ್ದಾರಿಯಿಂದ ಇನ್ನೊಂದು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಅಥವಾ ಒಂದು ಪ್ರಮುಖ ರಸ್ತೆಯನ್ನು ಸಂಪರ್ಕಿಸುವ ಒಳದಾರಿಗಳನ್ನು ಮೇಲ್ದರ್ಜೆಗೇರಿಸುವ ಸ್ಟರ್ ಯೋಜನೆಯಡಿ ನಡೆಯಲಿರುವ ಈ ಕಾಮಗಾರಿಯಿಂದ ಮುಂದಿನ ದಿನಗಳಲ್ಲಿ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂದರ್ಶಿಸುವವರಿಗೆ ಅನುಕೂಲವಾಗಲಿದೆ.

ಉಜಿರೆ ಪೇಟೆಯಿಂದ ಸಿದ್ದವನ ತನಕ ಈಗಾಗಲೇ ರಸ್ತೆ ಅಭಿವೃದ್ಧಿ ಹೊಂದಿದೆ. ಆದರೆ ಇಲ್ಲಿ ಮತ್ತೆ ಕಾಮಗಾರಿ ನಡೆಯಲಿದೆಯೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. 2 ಕಿ.ಮೀ. ವ್ಯಾಪ್ತಿಯ ಈ ರಸ್ತೆ ಅಭಿವೃದ್ಧಿ ಹೊಂದಿದ್ದರೂ, ಇಲ್ಲಿ ಸರಿಯಾದ ಫುಟ್ಪಾತ್, ಪಾರ್ಕಿಂಗ್ ವ್ಯವಸ್ಥೆಗಳು ಇರುವುದಿಲ್ಲರಸ್ತೆ ಅಭಿವೃದ್ಧಿ ಹೊಂದಿರುವ ಜಾಗಗಳಲ್ಲಿ ವಾಹನಗಳ ಬೇಕಾಬಿಟ್ಟಿ ಪಾರ್ಕಿಂಗ್‌ನಿಂದ ಇತರ ವಾಹನ ಸವಾರರು ಹೈರಾಣರಾಗುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.