ಉಪ್ಪಿನಂಗಡಿ : ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ – ಮರುಪಾವತಿಸಲು ನಿರಾಕರಿಸಿದ ಉಜಿರೆಯ ಉದ್ಯಮಿ ವಿರುದ್ಧ ಪ್ರಕರಣ

ಉಪ್ಪಿನಂಗಡಿ, ಡಿ.11 : ಕಣ್ತಪ್ಪಿನಿಂದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿದ್ದು, ಮರುಪಾವತಿಸಲು ನಿರಾಕರಿಸಿದ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ಣಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರಾಕರಿಸಿದ ಉಜಿರೆಯ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಉಪ್ಪಿನಂಗಡಿಯ ಮಠ ಎಂಬಲ್ಲಿ ಗ್ರಾನೈಟ್ ಉದ್ಯಮ ನಡೆಸಿಕೊಂಡಿರುವ ಹರಿರಾವ್ ಎಂಬವರು ದೂರು ನೀಡಿದ್ದು, ತನ್ನ ರಾಜಸ್ಥಾನದಲ್ಲಿನ ಸಂಬಂಧಿಕ ಲಕ್ಷ್ಮೀಚಂದ್ ಎಂಬವರಿಗೆ ಕಳುಹಿಸಬೇಕಾದ 19,000 ರೂ. ಕಣ್ಣಪ್ಪಿನಿಂದಾಗಿ ಉಜಿರೆಯ ಉದ್ಯಮಿಯೋರ್ವರ ಖಾತೆಗೆ ವರ್ಗಾವಣೆಗೊಂಡಿದ್ದು, ಈ ಮೊತ್ತದಲ್ಲಿ 10,000 ರೂ. ವನ್ನು ಹಿಂದಿರುಗಿಸಿ ಉಳಿದ ಮೊತ್ತವನ್ನು ಹಿಂದಿರುಗಿಸದೆ ಸತಾಯಿಸುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ರಾಹುಲ್ ಗಾಂಧಿ ಪೌರತ್ವಕ್ಕೆ ಕಂಟಕ ! ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ…

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕರಾವಳಿ ಭಾಗದಲ್ಲಿ ತಾಪಮಾನ ಏರಿಕೆ – ಮತ್ಸ್ಯಕ್ಷಾಮದ ಭೀತಿ ! ಅವಧಿಗೆ ಮುನ್ನವೇ ಲಂಗರು ಹಾಕುತ್ತಿವೆ ಮೀನುಗಾರಿಕಾ ಬೋಟ್ ಗಳು

⚠️ Contents are protected on this website.