ಉಪ್ಪಿನಂಗಡಿ: ಪ್ರೌಢ ಶಾಲಾ ವಿದ್ಯಾರ್ಥಿನಿಯೋರ್ವಳು ಕೀಟ ನಾಶಕ ಸೇವಿಸಿ ಆತ್ಮಹ*ತ್ಯೆ

ಉಪ್ಪಿನಂಗಡಿ: ಪ್ರೌಢ ಶಾಲಾ ವಿದ್ಯಾರ್ಥಿನಿಯೋರ್ವಳು ಕೀಟ ನಾಶಕ ಸೇವಿಸಿ ಆ*ತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ.ಇಳಂತಿಲ ಗ್ರಾಮದ ಪಾರಡ್ಕ ಮನೆ ನಿವಾಸಿ ಹ#ರ್ಷಿತಾ(15 ವ.) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಮೃತ ಬಾಲಕಿ ನವೆಂಬರ್ 04ರಂದು ತಲೆನೋವು ಎಂದು ಹೇಳಿ ಶಾಲೆಗೆ ತೆರಳದೆ ಮನೆಯಲ್ಲಿದ್ದು, ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಅಸ್ವಸ್ಥಗೊಂಡ ಬಾಲಕಿಯನ್ನು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ದಾಖಲಿಸುತ್ತಾರೆ. ಇಂದು ಸುಮಾರು ಮದ್ಯಾಹ್ನ ವೇಳೆ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಾಲಕಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ.

Advertisement

ಇನ್ನು ಮೃತ ಬಾಲಕಿಗೆ ಕಡಬದ ಮೂರಾಜೆ ನಿವಾಸಿ ರಾ#ಜೇಶ್ ಎಂಬಾತನು ಫೋನ್ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರುವುದರಿಂದ ವಿಷ ಪದಾರ್ಥ ಸೇವಿಸಿ ಆತ್ಮಹ*ತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯ ಇರುತ್ತದೆ. ಅವಳ ಸಾವಿನಲ್ಲಿ ಬೇರೆ ಯಾವುದೇ ಸಂಶಯ ಅಥವಾ ಕಾರಣ ತಿಳಿದಿರುವುದಿಲ್ಲ ಎಂದು ತಂದೆ ಪೊಲೀಸರಿಗೆ ದೂರು ನೀಡಿದ್ದು ಸತ್ಯಾ ಸತ್ಯತೆ ತನಿಖೆ ಬಳಿಕವಷ್ಟೇ ಹೊರಬೀಳಬೇಕಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.