ಬ್ರಹ್ಮಾವರ : ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ ಹಂಚಿಕೆ -ಉದ್ಯಮಿ ಹಾಗೂ ಬ್ಯಾಂಕ್ ಮ್ಯಾನೇಜರ್ ವಶಕ್ಕೆ

ಬ್ರಹ್ಮಾವರ, ಜ. 30 : ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಸಂದೇಶಗಳನ್ನು ಹಂಚಿಕೊಂಡ ಆರೋಪದ ಮೇಲೆ ಬ್ರಹ್ಮಾವರ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

Advertisement

ಕೋಟೇಶ್ವರದ ಕೆ. ನಾಗರಾಜ್(62) ಮತ್ತು ಬ್ರಹ್ಮಾವರದ ವಾರಂಬಳ್ಳಿಯ ಸಂತೋಷ್ ಕುಮಾರ್ ಶೆಟ್ಟಿ(56)ಯನ್ನು ವಶಕ್ಕೆ ಪಡೆಯಲಾಗಿದೆ. ಡಿವೈಎಸ್‌ಪಿ ಪ್ರಭು ಡಿ.ಟಿ., ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕರಾದ ಅಶೋಕ್ ಮಾಳಾಬಗಿ ಮತ್ತು ಸುದರ್ಶನ್ ದೊಡ್ಡಮನಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿ ಕೆ. ನಾಗರಾಜ್ ಉದ್ಯಮಿಯಾಗಿದ್ದು, ಆರೋಪಿ ಸಂತೋಷ್ ಕುಮಾರ್ ಶೆಟ್ಟಿ ಖಾಸಗಿ ಸಹಕಾರಿ ಬ್ಯಾಂಕ್ ಒಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

⚠️ Contents are protected on this website.