ಕೇರಳ : ವಯನಾಡ್ ನಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ – ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ !

Advertisement

ಕೇರಳ, ಜು. 7 : ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ನಿರಂತರ ಮಳೆಯಿಂದ ಸುರಿದ ಪರಿಣಾಮ ಮೆಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ರಸ್ತೆ ಕಾಮಗಾರಿ ಸ್ಥಳದ ಬಳಿ ಭೀಕರ ಭೂಕುಸಿತ ಸಂಭವಿಸಿದ್ದು, ಹಲವು ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Advertisement

ಮಣ್ಣಿನಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಈವರೆಗೆ 6 ಜನರನ್ನು ರಕ್ಷಿಸಲಾಗಿದೆ. ಅವರಲ್ಲಿ ಇಬ್ಬರು ಸಾವನ್ನಪ್ಪಿರುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ. ಮೀನಾಕ್ಷಿ ಸೇತುವೆ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಂದು ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Advertisement

ವಯನಾಡಿನಲ್ಲಿ ಕಳೆದ 24ಗಂಟೆಗಳಲ್ಲಿ ಭಾರೀ ಮಳೆಯಾಗಿದ್ದು, ಇದರ ಪರಿಣಾಮ ಭೂಕುಸಿತ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಗುಡ್ಡ ಕುಸಿತದ ವೇಳೆ ವಾಹನ ಸವಾರರು, ಜನರು ಅವಶೇಷಗಳಡಿ ಸಿಲುಕಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ವರದಿ ವಿವರಿಸಿದೆ.

ಘಟನಾ ಸ್ಥಳಕ್ಕೆ ರಕ್ಷಣಾ ತಂಡವನ್ನು ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದಾಗಿ ಸಚಿವ ಟಿ.ಸಿದ್ದಿಖಿ ತಿಳಿಸಿದ್ದು, ಭೂಕುಸಿತದಿಂದಾದ ಸಾವು-ನೋವಿನ ಬಗ್ಗೆ ಇನ್ನಷ್ಟೇ ನಿಖರ ಮಾಹಿತಿ ತಿಳಿದು ಬರಬೇಕಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ