ಮಂಗಳೂರು : ಶಾಸಕ ವೇದವ್ಯಾಸ ಕಾಮತ್, ಅವರ ಪತ್ನಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಅರೆಸ್ಟ್

Advertisement

ಮಂಗಳೂರು, ಫೆ. 07 : ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ ಬಗ್ಗೆ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಆಡಲಾಗಿರುವ ಮಾತನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಫೇಸ್ಟುಕ್‌ನಲ್ಲಿ ಪೋಸ್ಟ್ ಮಾಡಿದ್ದು, ಶಾಸಕರ ಪತ್ನಿಯನ್ನು ಅವಮಾನಿಸಿದ ಕುರಿತು ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಬಂಟ್ವಾಳ ತಾಲೂಕಿನ ಶರಣ್ ರೈ (29) ಎನ್ನುವಾತನ್ನು ಈ ಪ್ರಕರಣ ಸಂಬಂಧ ಪೊಲೀಸರು ಬಂಧನ ಮಾಡಿದ್ದಾರೆ.

Advertisement

ಶರಣ್ ರೈ ಅಮ್ಮಾಡಿ ನಿವಾಸಿಯಾಗಿದ್ದು, ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದು, ಫೇಸ್ಟುಕ್‌ನಲ್ಲಿ ಶಾಸಕ ವೇದವ್ಯಾಸ ಕಾಮತ್ ಪತ್ನಿಯನ್ನು ಅವಮಾನಿಸಿರುವ ರೀತಿ ಪೋಸ್ಟ್ ಮಾಡಿದ್ದು, ಈ ಕುರಿತು ಮಹಿಳೆಯೊಬ್ಬರು ಪೊಲೀಸ್ ದೂರನ್ನು ನೀಡಿದ್ದರು.

ಈ ಹೇಳಿಕೆಯಿಂದ ಗೃಹಿಣಿಯಾಗಿರುವ ಶಾಸಕರ ಪತ್ನಿಯ ಕುರಿತು ಸಮಾಜದಲ್ಲಿ ಅಗೌರವ ಉಂಟಾಗಿದೆ. ಮಹಿಳೆಯರ ಕುರಿತು ಕೀಳು ಅಭಿರುಚಿಯಿಂದ ಪೋಸ್ಟ್ ಮಾಡಿದ್ದಾಗಿದೆ ಎನ್ನುವ ದೂರಿನ ಪ್ರಕಾರ ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿ ಆರೋಪಿಯನ್ನು ಬಂಧನ ಮಾಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ