ವೇಣೂರು : ಪಿಕಪ್ ವಾಹನದಲ್ಲಿ ಅಕ್ರಮ ದನ ಸಾಗಾಟ – ಪ್ರಕರಣವನ್ನು ರದ್ದು ಪಡಿಸಿ ತೀರ್ಪು ನೀಡಿದ ಹೈಕೋರ್ಟ್

ವೇಣೂರು : ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿದೆ.

Advertisement

2023ರ ಡಿಸೆಂಬರ್ 8ರಂದು ಕರಿಮಣಿಲು ಗ್ರಾಮದ ವೇಣೂರು ಚರ್ಚ್ ಬಳಿಯ ಮೂಡುಬಿದ್ರಿ-ವೇಣೂರು ಸಾರ್ವಜನಿಕ ರಸ್ತೆಯಲ್ಲಿ ಎಸ್.ಬಿ. ಶ್ರೀ ಶೈಲ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮೂಡುಬಿದ್ರಿ ಕಡೆಯಿಂದ ರಂಗೇಗೌಡ ಎ.ಆರ್ ಎಂಬವರು ಪಿಕಪ್ ವಾಹನದಲ್ಲಿ ಎರಡು ದನಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಠಾಣಾ ಎಸ್‌ಐ ಶ್ರೀಶೈಲ ಅವರು ಆರೋಪಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಬಳಿಕ ಈ ಪ್ರಕರಣವನ್ನು ರದ್ದುಗೊಳಿಸುವಂತೆ ಆರೋಪಿ ರಂಗೇಗೌಡ ಎ.ಆರ್. ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಮೊಹಮ್ಮದ್ ನವಾಝ್ ಅವರು ಪ್ರಕರಣ ರದ್ದು ಪಡಿಸಿ ಆದೇಶ ಹೊರಡಿಸಿದ್ದಾರೆ. ಅರ್ಜಿದಾರರ ವರ ವಕೀಲರಾದ ಮಾರುತಿ ತನ್ನಯ್ಯ ನಾಯಕ್, ದೇವಾನಂದ ಕೆ. ಪ್ರಸಾದ್ ಕುಮಾರ್ ಮತ್ತು ವೆಂಕಟೇಶ್ ಪದ್ಮುಂಜ ವಾದಿಸಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.