ಬಂಟ್ವಾಳ, ಜು. 17 : ಬಿ. ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಅಮಾಯಕ ಹೆಣ್ಣು ಮಗಳು ಲಾವಣ್ಯ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬಿ. ಸಿ ರೋಡ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಲಾವಣ್ಯಳ ಹಂತಕನನ್ನು ಗಲ್ಲಿಗೇರಿಸಲು ಪ್ರತಿಭಟನಾಕಾರರು ಒತ್ತಾಯಿಸಿದರು.


