ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ – 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90ಕ್ಕೂ ಅಧಿಕ

ಬೆಳ್ತಂಗಡಿ, ಫೆ. 18 : ಭಾರತೀಯ ಪ್ರತಿಷ್ಠಿತ ಸಂಸ್ಥೆಗಳಾದ ಎನ್ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ತೋರಿದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಹಾಗೂ ಪ್ರತೀಕ್ ವಿ.ಎಸ್. ಅವರನ್ನು ವಿದ್ವತ್ ಕಾಲೇಜು ಪ್ರತಿಷ್ಠಾನದಿಂದ ಫೆ.17 ರಂದು ಗೌರವಿಸಲಾಯಿತು.

Advertisement

ಚಿನ್ಮಯ್ ಜಿ.ಕೆ. ಶೇ.99.6465 ಫಲಿತಾಂಶ ದಾಖಲಿಸಿದ್ದು, ಪ್ರತೀಕ್ ವಿ.ಎಸ್. ಶೇ.99.5473 ಪರ್ಸೆಂಟೈಲ್ ಪಡೆದಿರುವ ಹಿನ್ನೆಲೆ ವಿದ್ಯಾರ್ಥಿಗಳ ಸಾಧನೆಯನ್ನು ಪರಿಗಣಿಸಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಶ್ರೀ ಪ್ರಜ್ವಲ್ ರೈ ಮನೆಗೆ ತೆರಳಿ ಅಭಿನಂದಿಸಿ ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು. ಈ ವೇಳೆ ಚಿನ್ಮಯ್ ಜಿ.ಕೆ. ಪೋಷಕರಾದ ಗಣೇಶ್ ಭಟ್, ಮಾಲಿನಿ ಹೆಗಡೆ, ಪ್ರತೀಕ್ ವಿ.ಎಸ್. ಪೋಷಕರಾದ ವಸಂತ್ ಶೆಟ್ಟಿ, ಶಾಲಿನಿ ವಿ.ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ವಿದ್ವತ್ ಕಾಲೇಜಿಂದ ಪ್ರಥಮ ಬಾರಿಗೆ ಜೆಇಇ ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳ ಪೈಕಿ ಚಿನ್ಮಯ್ ಜಿ.ಕೆ., ಹಾಗೂ ಪ್ರತೀಕ್ ವಿ.ಎಸ್. ಶೇ.99 ಪರ್ಸೆಂಟೈಲ್ ಪಡೆದು ರಾಜ್ಯದಲ್ಲೇ ಗರಿಷ್ಠ ಸಾಧನೆ ತೋರಿದ್ದು, ಉಳಿದಂತೆ 21 ಮಂದಿ ಶೇ.90 ಕ್ಕಿಂತ ಅಧಿಕ ಪರ್ಸೆಂಟೈಲ್ ಪಡೆಯುವ ಮೂಲಕ ಚೊಚ್ಚಲ ಪ್ರಯತ್ನದಲ್ಲಿ ಈ ಸಾಧನೆ ಮಾಡಿದ ರಾಜ್ಯದ ಏಕೈಕ ಕಾಲೇಜೆಂಬ ಹೆಗ್ಗಳಿಕೆ ಪಾತ್ರವಾಗಿದೆ. ಈ ವೇಳೆ ಶೈಕ್ಷಣಿಕ ನಿರ್ದೇಶಕರಾದ ಶ್ರೀ ಗಂಗಾಧರ ಮಂಡಗಳಲೆ, ಆಡಳಿತಾಧಿಕಾರಿ ಅಶೋಕ ಕುಮಾರ್ ಶೆಟ್ಟಿ, ಪ್ರಾಂಶುಪಾಲರಾದ ಹರೀಶ್ ಕೆ.ಆರ್., ಉಪನ್ಯಾಸಕರಾದ ಪ್ರತಾಪ್ ದೊಡ್ಡಮನೆ, ರಂಗನಾಥ್ ಆರ್., ಪಿ.ಆರ್.ಒ ಚೈತ್ರೇಶ್ ಸಿ. ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.