ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ – 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90ಕ್ಕೂ ಅಧಿಕ

ಬೆಳ್ತಂಗಡಿ, ಫೆ. 18 : ಭಾರತೀಯ ಪ್ರತಿಷ್ಠಿತ ಸಂಸ್ಥೆಗಳಾದ ಎನ್ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ತೋರಿದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಹಾಗೂ ಪ್ರತೀಕ್ ವಿ.ಎಸ್. ಅವರನ್ನು ವಿದ್ವತ್ ಕಾಲೇಜು ಪ್ರತಿಷ್ಠಾನದಿಂದ ಫೆ.17 ರಂದು ಗೌರವಿಸಲಾಯಿತು.

Advertisement

ಚಿನ್ಮಯ್ ಜಿ.ಕೆ. ಶೇ.99.6465 ಫಲಿತಾಂಶ ದಾಖಲಿಸಿದ್ದು, ಪ್ರತೀಕ್ ವಿ.ಎಸ್. ಶೇ.99.5473 ಪರ್ಸೆಂಟೈಲ್ ಪಡೆದಿರುವ ಹಿನ್ನೆಲೆ ವಿದ್ಯಾರ್ಥಿಗಳ ಸಾಧನೆಯನ್ನು ಪರಿಗಣಿಸಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಶ್ರೀ ಪ್ರಜ್ವಲ್ ರೈ ಮನೆಗೆ ತೆರಳಿ ಅಭಿನಂದಿಸಿ ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು. ಈ ವೇಳೆ ಚಿನ್ಮಯ್ ಜಿ.ಕೆ. ಪೋಷಕರಾದ ಗಣೇಶ್ ಭಟ್, ಮಾಲಿನಿ ಹೆಗಡೆ, ಪ್ರತೀಕ್ ವಿ.ಎಸ್. ಪೋಷಕರಾದ ವಸಂತ್ ಶೆಟ್ಟಿ, ಶಾಲಿನಿ ವಿ.ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ವಿದ್ವತ್ ಕಾಲೇಜಿಂದ ಪ್ರಥಮ ಬಾರಿಗೆ ಜೆಇಇ ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳ ಪೈಕಿ ಚಿನ್ಮಯ್ ಜಿ.ಕೆ., ಹಾಗೂ ಪ್ರತೀಕ್ ವಿ.ಎಸ್. ಶೇ.99 ಪರ್ಸೆಂಟೈಲ್ ಪಡೆದು ರಾಜ್ಯದಲ್ಲೇ ಗರಿಷ್ಠ ಸಾಧನೆ ತೋರಿದ್ದು, ಉಳಿದಂತೆ 21 ಮಂದಿ ಶೇ.90 ಕ್ಕಿಂತ ಅಧಿಕ ಪರ್ಸೆಂಟೈಲ್ ಪಡೆಯುವ ಮೂಲಕ ಚೊಚ್ಚಲ ಪ್ರಯತ್ನದಲ್ಲಿ ಈ ಸಾಧನೆ ಮಾಡಿದ ರಾಜ್ಯದ ಏಕೈಕ ಕಾಲೇಜೆಂಬ ಹೆಗ್ಗಳಿಕೆ ಪಾತ್ರವಾಗಿದೆ. ಈ ವೇಳೆ ಶೈಕ್ಷಣಿಕ ನಿರ್ದೇಶಕರಾದ ಶ್ರೀ ಗಂಗಾಧರ ಮಂಡಗಳಲೆ, ಆಡಳಿತಾಧಿಕಾರಿ ಅಶೋಕ ಕುಮಾರ್ ಶೆಟ್ಟಿ, ಪ್ರಾಂಶುಪಾಲರಾದ ಹರೀಶ್ ಕೆ.ಆರ್., ಉಪನ್ಯಾಸಕರಾದ ಪ್ರತಾಪ್ ದೊಡ್ಡಮನೆ, ರಂಗನಾಥ್ ಆರ್., ಪಿ.ಆರ್.ಒ ಚೈತ್ರೇಶ್ ಸಿ. ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.