ಉಡುಪಿ : ತಮಿಳುನಾಡು ಸಿಎಂ’ಗೆ ಉಡುಪಿಯಲ್ಲಿ ಪ್ರತಿಭಟನೆಯ ಸ್ವಾಗತ – ಕಪ್ಪು ಬಾವುಟ ಪ್ರದರ್ಶಿಸಿದವರು ಪೊಲೀಸ್ ವಶಕ್ಕೆ !

Advertisement

ಉಡುಪಿ, ಜೂ. 12 : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಮೇಕೆದಾಟು ಯೋಜನೆ ವಿಚಾರವಾಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆಯ (ಕೆಆರ್‌ವಿ) 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಉಡುಪಿ ಜಿಲ್ಲೆಯ ಉದ್ಯಾವರದ ಬಳಿ ಜಮಾಯಿಸಿದ್ದ ಕಾರ್ಯಕರ್ತರು, ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದರು.

Advertisement

ತಮಿಳುನಾಡು ಸಿಎಂ ಭೇಟಿಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿದ್ದ ಪೊಲೀಸರು, ಪ್ರತಿಭಟನಾಕಾರರು ಸ್ಥಳಕ್ಕೆ ಬರುವ ಮುನ್ನವೇ ಅವರನ್ನು ತಡೆಹಿಡಿದು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದರು.

ಸಿಎಂ ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಮತ್ತು ಅವರು ಸಂಚರಿಸುವ ಮಾರ್ಗದುದ್ದಕ್ಕೂ ಪೊಲೀಸರು ತೀವ್ರ ನಿಗಾ ವಹಿಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ