ಬೆಳ್ತಂಗಡಿ : ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Advertisement

ಬೆಳ್ತಂಗಡಿ, ಡಿ. 16 : ಕಡಿಮೆ ಜಮೆ ಹಾಗೂ ಇನ್ನೂ ಪಾವತಿಯಾಗದ ರೈತರ ಖಾತೆಗೆ ಬೆಳೆ ವಿಮೆಯನ್ನು ವಾರದ ಒಳಗೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಆಗ್ರಹಿಸಿದ್ದಾರೆ.

ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೊಕ್ಕಡ ಹೋಬಳಿಗೆ ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರೋದಿಲ್ಲ ಬಂದ ಬೆಳೆ ವಿಮೆ ತುಂಬಾ ಕಡಿಮೆ ಜಮಾ ಆಗಿದ್ದು , ಇನ್ನೂ ತುಂಬಾ ರೈತರಿಗೆ ನಮ್ಮ ಸಂಘದ ವ್ಯಾಪ್ತಿಯ ಗ್ರಾಮಗಳಿಗೂ ತಾರತಮ್ಯ ಮಾಡಿದ್ದು, ಆದಷ್ಟು ಬೇಗ ಈ ಗೊಂದಲ ನಿವಾರಿಸಿ ವಾರದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಇದರ ಬಗ್ಗೆ ಈಗಾಗಲೇ ಹೈಕೋರ್ಟ್ ವಕೀಲರ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ತಿಳಿಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.