ಉಡುಪಿ : ಕುರ್ಚಿಯ ಮೇಲೆ ಕುಳಿತಲ್ಲಿಯೇ ಹೋಮ್ ನರ್ಸ್ ಸಾವು !

ಉಡುಪಿ, ಜ. 03 : ಕುರ್ಚಿಯ ಮೇಲೆ ಕೂತಲ್ಲಿಯೇ ಹೋಮ್ ನರ್ಸೊಬ್ಬರು ಮೃತಪಟ್ಟ ಘಟನೆ ಕಿನ್ನಿಮೂಲ್ಕಿ ಗರಡಿರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಹೊಮ್ ನರ್ಸ್ ಪ್ರದೀಪ್ ಅಜ್ಜರಕಾಡು(55) ಎಂದು ಗುರುತಿಸಲಾಗಿದೆ.

Advertisement

ಇವರು ತನ್ನ ಬಾಡಿಗೆ ಮನೆಯಲ್ಲಿ ಕುರ್ಚಿಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದು ಇದೇ ವೇಳೆ ತೀವ್ರ ಅಸ್ವಸ್ಥಗೊಂಡಿದ್ದರೆನ್ನಲಾಗಿದೆ. ತಕ್ಷಣ ಸ್ಥಳೀಯರು ನೀಡಿದ ಮಾಹಿತಿಯಂತೆ ಆಗಮಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು ಪ್ರದೀಪ್ ಅವರನ್ನು ಆಂಬುಲೆನ್ಸ್‌ ಮೂಲಕ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಪರಿಕ್ಷಿಸಿದ ವೈದ್ಯರಿಂದ ಪ್ರದೀಪ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆನ್ನಲಾಗಿದೆ. ಮೃತ ವ್ಯಕ್ತಿ ಸಮಾಜಮುಖಿಯಾಗಿದ್ದು, ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೇತ್ರತ್ವದಲ್ಲಿ ನಡೆಯುವ ಅನಾಥ ಶವಗಳ ಅಂತ್ಯಸಂಸ್ಕಾರ ನೇರವೆರಿಸುವ ಕಾರ್ಯದಲ್ಲಿ ಭಾಗಿಯಾಗುತ್ತಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.