ಕೊಲ್ಲಮೊಗ್ರು : ಶೇಂದಿ ಇಳಿಸಲೆಂದು ತೆಂಗಿನ ಮರವೇರಿದ್ದ ವ್ಯಕ್ತಿ, ಮರದಲ್ಲೇ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರು ಗ್ರಾಮದಲ್ಲಿ ನಡೆದಿದೆ.
ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದರು. ಎಂದಿನಂತೆ ಸೋಮವಾರ ಕೂಡಾ ಶೇಂದಿ ಇಳಿಸಲು ಮರ ಹತ್ತಿದ್ದ ಅವರು ಜೋರಾಗಿ ಬೊಬ್ಬೆ ಹಾಕಿದ್ದರೆನ್ನಲಾಗಿದೆ. ಬಳಿಕ ಅಗ್ನಿ ಶಾಮಕ ದಳದವರು ಬಂದು ಪರಿಶೀಲಿಸಿದಾಗ ವ್ಯಕ್ತಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

