ಮೊಗ್ರು : ಸೇನಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡ ರವರಿಗೆ ಅದ್ಧೂರಿ ಸ್ವಾಗತ

ಮೊಗ್ರು, ಫೆ. 03 : ರಾಷ್ಟ್ರ ಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು, ನಿವೃತ್ತ ಸೇನಾನಿಗಳ ಸಂಘ ಹಾಗೂ ಊರವರ ಸಹಕಾರದಲ್ಲಿ ಭಾರತ ಮಾತೆಯ ಸೇವೆಯಲ್ಲಿ 22 ವರ್ಷಗಳ ಕಾಲ ಧೈರ್ಯ, ತ್ಯಾಗ ಮತ್ತು ಗೌರವದ ಸೇವೆ ಸಲ್ಲಿಸಿ ಕರ್ತವ್ಯದಿಂದ ನಿವೃತ್ತಿ ಹೊಂದಿ ಫೆ 01 ರಂದು ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡ ರವರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

Advertisement

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿ, ಉಪ್ಪಿನಂಗಡಿಯಲ್ಲಿ ಹಿಂದೂ ಸಂಗಮ ಆಯೋಜಕರು ಸ್ವಾಗತಿಸಿ, ಸನ್ಮಾನಿಸಿ, ಕಲ್ಲೇರಿ, ಕುಪ್ಪೆಟ್ಟಿ, ಉರುವಾಲು ಪದವು, ಪದ್ಮುಂಜ, ಮೈರೋಳ್ತಡ್ಕ-ಶಿವನಗರ, ಸಾಲ್ಮರ, ಕಲ್ಲಮಾಡ, ಊಂತನಾಜೆ, ಅಲೆಕ್ಕಿ ಮಾರ್ಗವಾಗಿ ನಾಸಿಕ್ ಬ್ಯಾಂಡ್, ಸಿಡಿಮದ್ದು ಪ್ರದರ್ಶನ, ವಾಹನ ಜಾಥದೊಂದಿಗೆ ಜಿಲ್ಲೆ, ತಾಲೂಕು ನಿವೃತ ಸೇನಾನಿಗಳ ಸಂಘದ ಪದಾಧಿಕಾರಿಗಳು ಗೌರವ ವಂದನೆ ಸಲ್ಲಿಸಿ, ಮುಗೇರಡ್ಕ ಭಜನಾ ಮಂದಿರದ ಬಳಿ ಕುಟುಂಬಸ್ಥರು ಆರತಿ ಬೆಳಗಿಸುವ ಮೂಲಕ ಸ್ವಾಗತಿಸಿ, ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ರಸ್ತೆಯ ಇಕ್ಕೆಲದಲ್ಲಿ ಆಯಾ ಭಾಗದ ನಾಗರಿಕರು, ವಿವಿಧ ಸಂಘ ಸಂಸ್ಥೆಗಳು ಸನ್ಮಾನಿಸಿದರು. ತದನಂತರ ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಬಳಿ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಮೆರವಣಿಗೆ ಸಾಗುವ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಸನ್ಮಾನಿಸಿ, ಅಭಿನಂದಿಸಿದರು ಹಾಗೂ ಉದ್ಯಮಿಗಳಾದ ಕಿರಣ್ ಚಂದ್ರ ರವರು ಸನ್ಮಾನಿಸಿದರು. ಪುತ್ತೂರು ಕ್ಷೇತ್ರ ಮಾಜಿ ಶಾಸಕರಾದ ಸಂಜೀವ ಮಠಂದೂರು ಅಭಿನಂದನಾ ಭಾಷಣ ಮಾಡಿ ಸೈನಿಕರ ಸಾಧನೆ, ದೇಶ ಸೇವೆ ಯ ತ್ಯಾಗ, ಬಲಿದಾನದ ಬಗ್ಗೆ ಮಾತನಾಡಿದರು. ಸೇನಾ ನಿವೃತ್ತಿ ನಂತರ ಸಮಾಜ ಸೇವೆ ಸಂಘ ಸಂಸ್ಥೆಗಳ ಜೊತೆಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸುವಂತೆ ತಿಳಿಸಿ ದೇವಪ್ರಸಾದ್ ರವರ ಬಗ್ಗೆ ಗುಣಗಾನ ಮಾಡಿದರು. ಬೆಳ್ತಂಗಡಿ ತಾಲೂಕು ನಿವೃತ್ತ ಸೇನಾನಿಗಳ ಸಂಘದ ಅಧ್ಯಕ್ಷರಾದ ತಂಗಚ್ಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸೇನಾನಿ ವಿಕ್ರಂ ಜೆ. ಏನ್ ಸೇನಾ ವೃತ್ತಿ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಅಭಿನಂದನೆ ಸ್ವೀಕರಿಸಿದ ದೇವಪ್ರಸಾದ್ ಗೌಡ ರವರು ತಮ್ಮ ಅನುಭವ ಹಂಚಿಕೊಳ್ಳುವ ಜೊತೆಗೆ ಸೇನೆ, ಕಾರ್ಯಕ್ರಮ ಆಯೋಜಕರಿಗೆ, ಆಗಮಿಸಿದ ದೇಶಭಕ್ತರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬಂದಾರು ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ್ಯಗುತ್ತು, ನಿವೃತ್ತ ಸೇನಾನಿ ಚಂದಪ್ಪ ದಂಬೆತ್ತಿಮಾರು, ಅಶೋಕ್ ಪಿ. ಎಲ್ ಮುಗೇರಡ್ಕ, ಅಭಿನಂದನೆ ಸ್ವೀಕರಿಸೀದ ಸೇನಾನಿ ದೇವಪ್ರಸಾದ ಪತ್ನಿ ಶ್ರೀಮತಿ ಹರಿಣಾಕ್ಷಿ ದೇವಪ್ರಸಾದ್, ತಂದೆ ಬಾಬು ಗೌಡ ಮತ್ತು ಶ್ರೀಮತಿ ಮೋನಕ್ಕ, ಸಹೋದರ ಆನಂದ ಗೌಡ ಮತ್ತು ಹೇಮಲತಾ ಮತ್ತು ಮಕ್ಕಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರ ಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ,ಗ್ರಾಮ ಪಂಚಾಯತ್ ಬಂದಾರು, ಮೂವರು ದೈವಗಳ ದೈವಸ್ಥಾನ ಮುಗೇರಡ್ಕ,ಕೊರಗಪ್ಪ ಗೌಡ ಮತ್ತು ಮಕ್ಕಳು ಕುಟುಂಬಸ್ಥರು ದಂಡುಗ ಇವರುಗಳಿಂದ ಸನ್ಮಾನ ನೆರವೇರಿತು. ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ ಸ್ವಾಗತಿಸಿ, ಮುಖ್ಯ ಶಿಕ್ಷಕರಾದ ಮಾಧವ ಗೌಡ ದೊರ್ತೋಡಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು. ರಾಷ್ಟಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ಆಯೋಜಕರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಿರೀಶ್ ಗೌಡ. ಬಿ. ಕೆ. ಮೈರೋಳ್ತಡ್ಕ, ರಂಜಿತ್ ಗೌಡ ನಡುಮಜಲು, ಶಿವರಾಮ್ ಗೌಡ ಕೊಡಿನೆಕ್ಕಿಲು, ರಮೇಶ್ ಗೌಡ ನೆಕ್ಕರಾಜೆ, ವರುಣ್ ಗೌಡ ನೆಕ್ಕರಾಜೆ, ಗಂಗಾಧರ ಪೂಜಾರಿ ದಂಬೆತ್ತಿಮಾರು, ಪುರಂದರ ಗೌಡ ನೈಮಾರು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಿಹಿತಿಂಡಿ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.